Friday, September 27, 2024
Friday, September 27, 2024

SN Channabasappa ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳೆಸುವಲ್ಲಿ ಗುರುಗಳ ಪಾತ್ರ ಮಹತ್ತರ- ಶಾಸಕ ಚನ್ನಬಸಪ್ಪ

Date:

SN Channabasappa ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳುವಲ್ಲಿ ಗುರುಗಳ ಪಾತ್ರ ಮಹತ್ತರ. ಸಮಾಜದ ಪ್ರಗತಿಯಲ್ಲಿ ಪಾಲ್ಗೊಳ್ಳುವ ಪ್ರಜೆಗಳ ನಿರ್ಮಾಣ ಗುರುಗಳಿಂದ ಸಾಧ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕಲಾ ವಿಭಾಗದಲ್ಲಿ ಸಿ ಮತ್ತು ಡಿ ವಿಭಾಗದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವನದಲ್ಲಿ ಗುರುವಿನ ಮಾರ್ಗದರ್ಶನ ತುಂಬಾ ಮುಖ್ಯ. ಗುರುಗಳು ತೋರಿಸುವ ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದ್ದು, ಎಲ್ಲ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿದ್ದು, ವಿದ್ಯಾಭ್ಯಾಸದ ಜತೆಯಲ್ಲಿ ಎಲ್ಲರೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಅ.ನಾ.ವಿಜೇಂದ್ರ ಅವರು 55ನೇ ವಯಸ್ಸಿನಲ್ಲೂ ಪದವಿ ಪಡೆಯುವ ಮುಖಾಂತರ ಉತ್ತಮ ಸಾಧನೆ ಮಾಡಿದ್ದಾರೆ. ಗುರುಗಳ ಮಾರ್ಗದರ್ಶನದಿಂದ ಇಂತಹ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ, ವಿದ್ಯಾರ್ಥಿಗಳ ಸಾಧನೆಯಿಂದ ಕಾಲೇಜು ಉತ್ತಮ ಹೆಸರು ಗಳಿಸಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಈಗಿನ ವಿದ್ಯಾರ್ಥಿಗಳು ಗಮನ ವಹಿಸಬೇಕು ಎಂದು ಹೇಳಿದರು.

SN Channabasappa ಇದೇ ಸಂದರ್ಭದಲ್ಲಿ ಅ.ನಾ.ವಿಜೇಂದ್ರ ಅವರು 55ನೇ ವಯಸ್ಸಿನಲ್ಲಿ ಬಿಎ ಪದವಿ ಪಡೆಯಲು ಸಹಕರಿಸಿದ ಎಲ್ಲ ಗುರುವೃಂದದವರಿಗೆ ಅಭಿನಂದನೆ ಸಲ್ಲಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಅ.ನಾ.ವಿಜೇಂದ್ರ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...