Wednesday, October 2, 2024
Wednesday, October 2, 2024

Taluk Panchayath Kadur ದೊಡ್ಡಪಟ್ಟಣಗೆರೆ ಗ್ರಾಪಂ ವ್ಯಾಪ್ತಿಯ ರಸ್ತೆ,ಚರಂಡಿ,ನೀರಿನ ಸಮಸ್ಯೆಗೆ ಆದ್ಯ ಗಮನ-ಶಾಲಿನಿ ದಿನೇಶ್

Date:

Taluk Panchayath Kadur ಕಡೂರು ತಾಲ್ಲೂಕಿನ ದೊಡ್ಡಪಟ್ಟಣಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಾಲಿನಿ ದಿನೇಶ್ ಮತ್ತು ಉಪಾಧ್ಯಕ್ಷರಾಗಿ ನಾಗರತ್ನ ಮಹೇಶ್ ಅವಿರೋಧವಾಗಿ ಆಯ್ಕೆಯಾದರು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆ ಅಧ್ಯಕ್ಷ ಸ್ಥಾನಕ್ಕೆ ಮತ್ತು ಬಿಸಿಎಂ ಉಪಾಧ್ಯಕ್ಷ ಸ್ಥಾನಗಳಿಗೆ ಶಾಲಿನಿ ದಿನೇಶ್ ಮತ್ತು ನಾಗರತ್ನ ಮಹೇಶ್ ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ರಾಜಪ್ಪ ಅವಿರೋಧ ಆಯ್ಕೆಯನ್ನು ಘೋಷಿಸಿದರು.

Taluk Panchayath Kadur ಅಭಿನಂದನೆ ಸಲ್ಲಿಸಿ ಮಾತನಾಡಿದ ಬಿಜೆಪಿ ಮುಖಂಡ ಜಿಗಣೇಹಳ್ಳಿ ನೀಲಕಂಠಪ್ಪ ಅಧಿಕಾರ ವಿಕೇಂದ್ರೀ ಕರಣದ ಪ್ರಜಾ ಪ್ರಭುತ್ವದಲ್ಲಿ ಸ್ಪರ್ಧೆಗಳು ಅನಿವಾರ್ಯ. ಹಾಗಾಗಿ ಚುನಾವಣೆ ನಂತರ ಎಲ್ಲರ ಜನಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ನೂತನ ಅಧ್ಯಕ್ಷೆ ಶಾಲಿನಿ ದಿನೇಶ್ ಮಾತನಾಡಿ ಗ್ರಾ.ಪಂ. ವ್ಯಾಪ್ತಿಗೆ ಸೇರುವ 11 ಗ್ರಾಮಗಳಿಗೆ ಮೂಲ ಸೌಕರ್ಯಗಳಾದ ರಸ್ತೆ, ಚರಂಡಿ, ನೀರಿನ ಸಮಸ್ಯೆ ಬಾರದಂತೆ ಎಲ್ಲಾ ಸದಸ್ಯರ ಸಲಹೆ ಮತ್ತು ಅಭಿಪ್ರಾಯ ಪಡೆದು ಅಭಿವೃದ್ದಿಗೆ ಮುಂದಾಗಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಹನುಮಂತಪ್ಪ, ಗಿರೀಶ್ ನಾಯ್ಕ, ಶೋಭಾ ರವಿ, ನಾಗರಾಜ ನಾಯ್ಕ, ಶೃತಿ, ಬಿಜೆಪಿ ಮುಖಂಡ ಮೌನೇಶ್, ದೇವರಾಜ್, ತಮ್ಮಯ್ಯ, ಮಹೇಶ್, ತಿಮ್ಮಯ್ಯ, ಜಗದೀಶ್ ಹಾಗೂ ಪಟ್ಟಣಗೆರೆ ಮತ್ತು ಬಂಡಿಕೊಪ್ಪಲಿನ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...