Thursday, March 19, 2026
Thursday, March 19, 2026

Sarji Hospital Shivamogga ಭಾರತವು ಶ್ರೇಷ್ಠ ಮತ್ತು ಪುಣ್ಯಭೂಮಿ, ಇಲ್ಲಿ ಜನಿಸಿದ ನಾವೇ ಧನ್ಯರು – ಡಾ.ಧನಂಜಯ ಸರ್ಜಿ

Date:

Sarji Hospital Shivamogga ಶ್ರೇಷ್ಠ ಮತ್ತು ಪುಣ್ಯ ಭೂಮಿ ಭಾರತ ದೇಶದಲ್ಲಿ ಜನಿಸಿದ ನಾವೇ ಧನ್ಯರು ಎಂದು ಸಂಸ್ಥಾಪಕರು ಸರ್ಜಿ ಗ್ರೂಪ್ ಆಫ್ ಹಾಸ್ಪಿಟಲ್ಸ್ ಸಂಸ್ಥಾಪಕ, ಮಕ್ಕಳ ತಜ್ಞ ಡಾ. ಧನಂಜಯ್ ಸರ್ಜಿ ಹೇಳಿದರು.
77 ನೇ ಸ್ವಾತಂತ್ರೋತ್ಸವ ದಿನಾಚರಣೆ ಪ್ರಯುಕ್ತ ಶಾಂತಲಾ ಸಮೂಹ ಸಂಸ್ಥೆಗಳ ವತಿಯಿಂದ ಮಾಚೇನಹಳ್ಳಿಯ ಪ್ರಾರ್ಥನಾ ಇಂಜಿನಿಯರಿಂಗ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭವ್ಯ ಭಾರತದ ಇತಿಹಾಸ, ಸ್ವಾತಂತ್ರ‍್ಯದ ಹಿನ್ನಲೆ, ಭಾರತದ ಹಿರಿಮೆ, ಗರಿಮೆ, ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗಮಾಡಿದ ಸಹಸ್ರಾರು ವೀರರ ಬಗ್ಗೆ ಪ್ರಸ್ತುತ ಪೀಳಿಗೆಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ಶಾಂತಲಾ ಸಮೂಹ ಸಂಸ್ಥೆಗಳು ದೇಶ ವಿದೇಶಗಳಿಗೆ ಉತ್ತಮ ಗುಣಮಟ್ಟದ ಕ್ಯಾಸ್ಟಿಂಗ್‌ಗಳನ್ನು ಸರಬರಾಜು ಮಾಡುವುದರ ಮೂಲಕ ದೇಶದ ಆರ್ಥಿಕತೆಗೆ ತಮ್ಮದೇ ಆದ ಉತ್ತಮ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ. ಶಾಂತಲಾ ಸಮೂಹ ಸಂಸ್ಥೆ ಕಟ್ಟಿ ಬೆಳೆಸುವುದರೊಂದಿಗೆ ಸಾವಿರಾರು ಉದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದ ಎಸ್.ರುದ್ರೇಗೌಡ ಮತ್ತು ತಂಡದ ಸಾಧನೆ ವಿಶೇಷ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಗತಿ ಸ್ಟೀಲ್ ಕ್ಯಾಸ್ಟಿಂಗ್ಸ್ ಸಂಸ್ಥೆ ಉಪಾಧ್ಯಕ್ಷ ಶಾಂತಪ್ಪ ಕೆ.ಸಿ. ಮಾತನಾಡಿ, ಸಹಸ್ರಾರು ವೀರರ ತ್ಯಾಗ ಬಲಿದಾನಗಳಿಂದ ಭಾರತ ದೇಶ ಸ್ವಾತಂತ್ರ್ಯಯವಾಯಿತು. ಭವಿಷ್ಯ ಸದೃಢ ಭಾರತ ನಿರ್ಮಾಣ ನಮ್ಮ ಜವಾಬ್ದಾರಿ ಎಂದು ಹೇಳಿದರು.
Sarji Hospital Shivamogga 77ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಂತಲಾ ಸಮೂಹ ಸಂಸ್ಥೆಗಳ ಮಹಿಳಾ ಮತ್ತು ಪುರುಷ ಉದ್ಯೋಗಿಗಳಿಗೆ ಏರ್ಪಡಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ರಾಣಿ, ಮಧು.ಎಸ್, ಸೋಮಶೇಖರ್.ಸಿ.ಆರ್, ಉಮೇಶ್.ಕೆ.ಆರ್, ಸಿಂಧುಶ್ರೀ.ವಿ, ನಾಗರಾಜ್.ವಿ.ಡಿ, ಶೃತಿ ಹಿರೇಮಠ, ಮ್ಯಾನೇಜರ್ ನಂಜುಂಡೇಶ್ವರ ಎಚ್.ಬಿ, ಶಾಂತಲಾ ಸಮೂಹ ಸಂಸ್ಥೆಗಳ ನಿರ್ದೇಶಕರು, ಸಿಬ್ಬಂದಿ ಮತ್ತು ಉದ್ಯೋಗಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...