Thursday, March 19, 2026
Thursday, March 19, 2026

World Folk Day ತೀರ್ಥಹಳ್ಳಿಯಲ್ಲಿ ವಿಶ್ವ ಜಾನಪದ ದಿನಾಚರಣೆ

Date:

World Folk Day ಕರ್ನಾಟಕ ಜಾನಪದ ಪರಿಷತ್ತು, ತೀರ್ಥಹಳ್ಳಿ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಸಾಂಸ್ಕೃತಿಕ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಕಾರದಲ್ಲಿ ವಿಶ್ವ ಜಾನಪದ ದಿನಾಚರಣೆ ಪ್ರಯುಕ್ತ ಆಗಸ್ಟ್ 18 ರಂದು ಮಧ್ಯಾಹ್ನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು.

ಪ್ರಿನ್ಸಿಪಾಲರಾದ ವೈ. ಎಂ. ಸುಧಾ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ತು ತೀರ್ಥಹಳ್ಳಿ ತಾಲ್ಲೂಕು ಅಧ್ಯಕ್ಷರಾದ ಲೀಲಾವತಿ ಜಯಶೀಲ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಬಸವಾನಿಯ ಜಾನಪದ ವೈದ್ಯರಾದ ವೆಂಕಟರಮಣ ಅವರನ್ನು ಸನ್ಮಾನಿಸಲಾಯಿತು.

ಜಾನಪದಲ್ಲಿ ಮಹಿಳೆ ವಿಚಾರವಾಗಿ ಡಾ. ಬಿ. ಎಂ. ಜಯಶೀಲ ಮಾತನಾಡಿದರು.

ವಿದ್ಯಾರ್ಥಿಗಳು ಜನಪದ ಹಾಡುಗಳನ್ನು ಹೇಳಿದರು. ವೇದಿಕೆಯಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಟಿ. ಕೆ. ರಮೇಶ್ ಶೆಟ್ಟಿ, ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ.ಜಿ. ವೆಂಕಟೇಶ್, ಉಪಾಧ್ಯಕ್ಷರಾದ ನಡಬೂರು ವೆಂಕಟೇಶ್, ಬೆಜ್ಜವಳ್ಳಿ ಮಂಜಪ್ಪ, ಗೋಪಾಲ ಕೃಷ್ಣ ಗುಂಡಗದ್ದೆ, ಪ್ರೇಮಾ ಮೇಡಂ, ಸಾಹಿತಿಗಳಾದ ಶಿವಾನಂದ ಕರ್ಕಿ, ಕಸಾಪ ಕೋಶಾಧ್ಯಕ್ಷರಾದ ಹಾಲಿಗೆ ನಾಗರಾಜ್, ಆರ್. ಎಂ. ಧರ್ಮಣ್ಣ, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್. ಎಸ್. ಎಸ್. ಉಪನ್ಯಾಸಕರಾದ ಎಸ್. ಎಂ. ಜಗದೀಶ್ ನಿರೂಪಿಸಿದರು. ಕಜಾಪ ಸಂಘಟನಾ ಕಾರ್ಯದರ್ಶಿ, ಗಾಯಕಿ ಶರ್ಮಿಳಾ ಮಂಜುನಾಥ ಅವರ ಜಾನಪದ ಹಾಡಿನೊಂದಿಗೆ World Folk Day ಕಾರ್ಯಕ್ರಮ ಆರಂಭವಾಯಿತು. ಉಪನ್ಯಾಸ ಕರಾದ ನಾಗಭೂಷಣ ಸ್ವಾಗತಿಸಿದರು. ಬಿ. ಇ. ಪ್ರಕಾಶ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...