Thursday, March 19, 2026
Thursday, March 19, 2026

Siddaramaiah ಅರಸು ಜಯಂತಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ
ಸಿದ್ಧರಾಮಯ್ಯ
ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಅರಸು ಅವರ ಕಾರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ತೆರಳಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.

ಸಚಿವರಾದ

, ಶಿವರಾಜ್ ತಂಗಡಗಿ ಕೆ.ಜೆ.ಜಾರ್ಜ್ ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು
ಅಧಿಕಾರ, ಸಂಪತ್ತು ಮತ್ತು ಅವಕಾಶದ ಹೆಬ್ಬಾಗಿಲನ್ನು ಎಲ್ಲರಿಗೂ ತೆರೆದು, ಸಮಾನವಾಗಿ ಹಂಚಿಕೆ ಮಾಡುವ ಸಾಮಾಜಿಕ ನ್ಯಾಯದ ಪಾಲನೆಗೆ ಮಾದರಿಯಾಗಿರುವವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು.

ಅರಸು ಅವರು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರುವ ನಾಯಕರನ್ನು ಗುರುತಿಸಿ ಅವಕಾಶ ಕೊಟ್ಟು ರಾಜಕೀಯವಾಗಿ ಬೆಳೆಸಿದರು, ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ ಹಂಚಿಕೆಗೆಗೆ ಕಾರಣರಾದರು, ಮೀಸಲಾತಿಯ ಮೂಲಕ ಅವಕಾಶ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು.

ಅರಸು ಅವರು ಎಳೆದು ತಂದು ನಿಲ್ಲಿಸಿರುವ ಈ ಸಾಮಾಜಿಕ ನ್ಯಾಯದ ಬಂಡಿಯನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ, ಮುಖ್ಯಮಂತ್ರಿಯಾಗಿ ನನ್ನ ಮೇಲಿದೆ.

Siddaramaiah ನನ್ನ ರಾಜಕೀಯ ಜೀವನಕ್ಕೆ ಹಲವಾರು ಹಿರಿಯರ ಚಿಂತನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ಡಿ.ದೇವರಾಜ ಅರಸು ಅವರಿಗೆ ವಿಶೇಷವಾದ ಸ್ಥಾನವಿದೆ. ಅವರಂತೆ ನಾನೂ ಕೂಡಾ ಮೈಸೂರಿನ ಮಣ್ಣಿನ ಮಗ ಎಂಬುದು ನನಗೆ ಖಂಡಿತ ಹೆಮ್ಮೆಯ ವಿಷಯ ಎಂದು ದೇವರಾಜ ಅರಸು
ಬಗ್ಗೆ ಸಿದ್ಧರಾಮಯ್ಯ ಮನದುಂಬಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...