Monday, February 2, 2026
Monday, February 2, 2026

Siddaramaiah ಅರಸು ಜಯಂತಿಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ
ಸಿದ್ಧರಾಮಯ್ಯ
ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಅರಸು ಅವರ ಕಾರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ತೆರಳಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.

ಸಚಿವರಾದ

, ಶಿವರಾಜ್ ತಂಗಡಗಿ ಕೆ.ಜೆ.ಜಾರ್ಜ್ ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು
ಅಧಿಕಾರ, ಸಂಪತ್ತು ಮತ್ತು ಅವಕಾಶದ ಹೆಬ್ಬಾಗಿಲನ್ನು ಎಲ್ಲರಿಗೂ ತೆರೆದು, ಸಮಾನವಾಗಿ ಹಂಚಿಕೆ ಮಾಡುವ ಸಾಮಾಜಿಕ ನ್ಯಾಯದ ಪಾಲನೆಗೆ ಮಾದರಿಯಾಗಿರುವವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು.

ಅರಸು ಅವರು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರುವ ನಾಯಕರನ್ನು ಗುರುತಿಸಿ ಅವಕಾಶ ಕೊಟ್ಟು ರಾಜಕೀಯವಾಗಿ ಬೆಳೆಸಿದರು, ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ ಹಂಚಿಕೆಗೆಗೆ ಕಾರಣರಾದರು, ಮೀಸಲಾತಿಯ ಮೂಲಕ ಅವಕಾಶ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು.

ಅರಸು ಅವರು ಎಳೆದು ತಂದು ನಿಲ್ಲಿಸಿರುವ ಈ ಸಾಮಾಜಿಕ ನ್ಯಾಯದ ಬಂಡಿಯನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ, ಮುಖ್ಯಮಂತ್ರಿಯಾಗಿ ನನ್ನ ಮೇಲಿದೆ.

Siddaramaiah ನನ್ನ ರಾಜಕೀಯ ಜೀವನಕ್ಕೆ ಹಲವಾರು ಹಿರಿಯರ ಚಿಂತನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ಡಿ.ದೇವರಾಜ ಅರಸು ಅವರಿಗೆ ವಿಶೇಷವಾದ ಸ್ಥಾನವಿದೆ. ಅವರಂತೆ ನಾನೂ ಕೂಡಾ ಮೈಸೂರಿನ ಮಣ್ಣಿನ ಮಗ ಎಂಬುದು ನನಗೆ ಖಂಡಿತ ಹೆಮ್ಮೆಯ ವಿಷಯ ಎಂದು ದೇವರಾಜ ಅರಸು
ಬಗ್ಗೆ ಸಿದ್ಧರಾಮಯ್ಯ ಮನದುಂಬಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...