Monday, December 15, 2025
Monday, December 15, 2025

Chandrayaan-3 ಚಂದ್ರಯಾನ 3 ಯಶಸ್ವಿಯಾಗಲಿ: ಯೋಗಪಟುಗಳಿಂದ ಶುಭಹಾರೈಕೆ

Date:

Chandrayaan-3 ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ಮೇಲ್ಮೈಗೆ ಇಳಿಯಲು ಸಿದ್ಧವಾಗಿದೆ. ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ಯೋಗಪಟುಗಳು ಚಂದ್ರಯಾನ ಯಶಸ್ವಿಯಾಗಲು ಶುಭಹಾರೈಸಿದ್ದಾರೆ.

ಭಾರತ ಐತಿಹಾಸಿಕ ಚಂದ್ರಯಾನ 3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಲು ಶಿವಗಂಗಾ ಯೋಗ ಕೇಂದ್ರದ ಎಲ್ಲಾ ಯೋಗಪಟುಗಳು ಶಿವಮೊಗ್ಗದಲ್ಲಿ ಪ್ರಾರ್ಥನೆ ಹಾಗೂ ಹಾರೈಕೆ ಸಲ್ಲಿಸಿದರು.

ಬುಧವಾರ ಬೆಳಗ್ಗೆ ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಎಲ್ಲಾ ಯೋಗಪಟುಗಳು ಇಸ್ರೋ ಸಂಸ್ಥೆಯ ವಿಜ್ಞಾನಿಗಳಿಗೆ ಹಾಗೂ ವಿಶೇಷವಾಗಿ ಶಿವಮೊಗ್ಗದ ವಿಜ್ಞಾನಿಗಳಾದ ಪುಟ್ಟಮ್ಮ ಶಿವಾನಿ ಹಾಗೂ ಚೈತ್ರ ಅವರಿಗೆ ವಿಶೇಷ ಧನ್ಯವಾದಗಳು ಅರ್ಪಿಸಿದರು.

ಹಗಲಿರಳು ಶ್ರಮಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂತಹ ಸಾಧನೆ ಮಾಡುತ್ತಿರುವುದು ತುಂಬಾ ಶ್ಲಾಘನೀಯವಾಗಿದೆ.

ನಮ್ಮ ದೇಶದ ಹೆಮ್ಮೆ ವಿಶ್ವ ಭೂಪಟದಲ್ಲಿ ನಮ್ಮ ದೇಶ ದಾಖಲಾಗಲಿದೆ ಎಂದು ಯೋಗ ಶಿಕ್ಷಕ ಜಿಎಸ್ ಓಂಕಾರ್, ಹರೀಶ್, ವಿಜಯ ಕೃಷ್ಣ ಅಭಿಮತ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಯೋಗಪಟುಗಳು ಆಲ್ ದ ಬೆಸ್ಟ್ ಇಸ್ರೋ, ಆಲ್ ದ ಬೆಸ್ಟ್ ಚಂದ್ರಯಾನ 3 ಎಂದು ಘೋಷಣೆಗಳನ್ನು ಕೂಗುವುದರ ಮುಖಾಂತರ ಶುಭ ಹಾರೈಸಿದರು. ಸಾರ್ವಜನಿಕರು ಐತಿಹಾಸಿಕ ಕ್ಷಣವನ್ನು ವೀಕ್ಷಣೆ ಮಾಡಲು ಎಲ್ಲ ಯೋಗಪಟುಗಳು ಕೇಳಿಕೊಂಡರು.

Chandrayaan-3 ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಉದ್ಯಮಿಗಳಾದ ಮಹೇಶ್, ಶ್ರೀನಿವಾಸ್, ನರಸೋಜಿ ರಾವ್, ಕಾಟನ್ ಜಗದೀಶ್, ಆನಂದ್, ಗಾಯತ್ರಿ, ಸುಜಾತ, ದೀಪಕ್ ಹಾಗೂ ಎಲ್ಲ ಯೋಗಪಟುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...