Sunday, August 23, 2026
Sunday, August 23, 2026

Chandrayaan-3 ಚಂದ್ರಯಾನ 3 ಯಶಸ್ವಿಯಾಗಲಿ: ಯೋಗಪಟುಗಳಿಂದ ಶುಭಹಾರೈಕೆ

Date:

Chandrayaan-3 ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ಮೇಲ್ಮೈಗೆ ಇಳಿಯಲು ಸಿದ್ಧವಾಗಿದೆ. ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ಯೋಗಪಟುಗಳು ಚಂದ್ರಯಾನ ಯಶಸ್ವಿಯಾಗಲು ಶುಭಹಾರೈಸಿದ್ದಾರೆ.

ಭಾರತ ಐತಿಹಾಸಿಕ ಚಂದ್ರಯಾನ 3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಲು ಶಿವಗಂಗಾ ಯೋಗ ಕೇಂದ್ರದ ಎಲ್ಲಾ ಯೋಗಪಟುಗಳು ಶಿವಮೊಗ್ಗದಲ್ಲಿ ಪ್ರಾರ್ಥನೆ ಹಾಗೂ ಹಾರೈಕೆ ಸಲ್ಲಿಸಿದರು.

ಬುಧವಾರ ಬೆಳಗ್ಗೆ ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಎಲ್ಲಾ ಯೋಗಪಟುಗಳು ಇಸ್ರೋ ಸಂಸ್ಥೆಯ ವಿಜ್ಞಾನಿಗಳಿಗೆ ಹಾಗೂ ವಿಶೇಷವಾಗಿ ಶಿವಮೊಗ್ಗದ ವಿಜ್ಞಾನಿಗಳಾದ ಪುಟ್ಟಮ್ಮ ಶಿವಾನಿ ಹಾಗೂ ಚೈತ್ರ ಅವರಿಗೆ ವಿಶೇಷ ಧನ್ಯವಾದಗಳು ಅರ್ಪಿಸಿದರು.

ಹಗಲಿರಳು ಶ್ರಮಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂತಹ ಸಾಧನೆ ಮಾಡುತ್ತಿರುವುದು ತುಂಬಾ ಶ್ಲಾಘನೀಯವಾಗಿದೆ.

ನಮ್ಮ ದೇಶದ ಹೆಮ್ಮೆ ವಿಶ್ವ ಭೂಪಟದಲ್ಲಿ ನಮ್ಮ ದೇಶ ದಾಖಲಾಗಲಿದೆ ಎಂದು ಯೋಗ ಶಿಕ್ಷಕ ಜಿಎಸ್ ಓಂಕಾರ್, ಹರೀಶ್, ವಿಜಯ ಕೃಷ್ಣ ಅಭಿಮತ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಯೋಗಪಟುಗಳು ಆಲ್ ದ ಬೆಸ್ಟ್ ಇಸ್ರೋ, ಆಲ್ ದ ಬೆಸ್ಟ್ ಚಂದ್ರಯಾನ 3 ಎಂದು ಘೋಷಣೆಗಳನ್ನು ಕೂಗುವುದರ ಮುಖಾಂತರ ಶುಭ ಹಾರೈಸಿದರು. ಸಾರ್ವಜನಿಕರು ಐತಿಹಾಸಿಕ ಕ್ಷಣವನ್ನು ವೀಕ್ಷಣೆ ಮಾಡಲು ಎಲ್ಲ ಯೋಗಪಟುಗಳು ಕೇಳಿಕೊಂಡರು.

Chandrayaan-3 ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಉದ್ಯಮಿಗಳಾದ ಮಹೇಶ್, ಶ್ರೀನಿವಾಸ್, ನರಸೋಜಿ ರಾವ್, ಕಾಟನ್ ಜಗದೀಶ್, ಆನಂದ್, ಗಾಯತ್ರಿ, ಸುಜಾತ, ದೀಪಕ್ ಹಾಗೂ ಎಲ್ಲ ಯೋಗಪಟುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...