Friday, March 20, 2026
Friday, March 20, 2026

District Commissioner Office Shimoga ಶಿವಮೊಗ್ಗ ನಗರದಲ್ಲಿ ದಿನ ಬಿಟ್ಟು ದಿನ ವಾಹನ ಪಾರ್ಕಿಂಗ್ ವ್ಯವಸ್ಥೆ: ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸೂಚನೆ

Date:

District Commissioner Office Shimoga ಶಿವಮೊಗ್ಗ ನಗರ ಪೂರ್ವ ಸಂಚಾರ ಪೋಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಸಂಚಾರ ವೃತ್ತದ ಪೋಲೀಸ್ ಠಾಣೆಗಳ ಕೆಳಕಂಡ ಪ್ರಮುಖ ರಸ್ತೆಗಳಲ್ಲಿ ದೇವಸ್ಥಾನ, ಆಸ್ಪತ್ರೆ, ಬ್ಯಾಂಕ್, ಹೋಟೆಲ್ ಮತ್ತು ಲಾಡ್ಜ್‍ಗಳು ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ, ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ದಿನ ಬಿಟ್ಟು ದಿನ ಪಾಕಿರ್ಂಗ್ ವಾಹನ ನಿಲುಗಡೆ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಆದೇಶವನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಹೊರಡಿಸಿರುತ್ತಾರೆ.

ಮೋಟಾರು ವಾಹನ ಕಾಯ್ದೆ 1988 ಕಲಂ 177 ರನ್ವಯ ಪೂರ್ವ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಈ ಕೆಳಕಂಡಂತೆ ದಿನ ಬಿಟ್ಟು ದಿನ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.

ರತ್ನಮ್ಮ ಮಾಧವ ರಾವ್ ರಸ್ತೆಯ ಸುರಭಿ ಹೋಟೆಲ್ ಕ್ರಾಸ್‍ನಿಂದ ಆದಿತ್ಯ ಡಯಾಗ್ನೋಸ್ಟಿಕ್ ಕ್ರಾಸ್‍ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ. ಪಾರ್ಕ್ ಬಡಾವಣೆಯ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಕ್ರಾಸ್ (ಹಳೆಯ ಸಿಂಡಿಕೇಟ್ ಬ್ಯಾಂಕ್ ) ನಿಂದ ಬಾಲ್ ರಾಜ್ ಅರಸ್ ರಸ್ತೆಯ ಜಾಯಾಲುಕಾಸ್ (ಮಧುರಾ ಪ್ಯಾರಡೈಸ್ ) ಕ್ರಾಸ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ. ವಾಸವಿ ವೃತ್ತದಿಂದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನಬಿಟ್ಟು ದಿನ ವಾಹನ ನಿಲುಗಡೆ.

ತಿಲಕ್ ನಗರ ಮುಖ್ಯ ರಸ್ತೆಯ ಭರತ್ ನ್ಯೂರೋಕ್ಲೀನಿಕ್ ನಿಂದ ಪಾರ್ಕ್ ಬಡವಣೆಯ ಮುಖ್ಯ ರಸ್ತೆ (ರಾಘವೇಂದ್ರ ಸ್ವಾಮಿ ಮಠದ ಹಿಂಭಾಗ ರಸ್ತೆ) ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ. ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್ ನಿಂದ ಶಿವಶಂಕರ ಗ್ಯಾರೇಜ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ. ದಿ|| ಪಂಡಿತ್ ದೀನ್ ದಯಾಳ್ ರಸ್ತೆಯ ಆಕಾಶ್ ಇನ್ ಹೋಟೇಲ್ ನಿಂದ ಪಂಚಮುಖಿ ಅಂಜನೇಯ ಸ್ವಾಮಿ ದೇವಸ್ಥಾನದವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.

District Commissioner Office Shimoga ತಿಲಕ್ ನಗರ ಮುಖ್ಯ ರಸ್ತೆಯಿಂದ ಭರತ್ ನ್ಯೂರೋಕ್ಲೀನಿಕ್ ರಸ್ತೆಯವರೆಗೆ ಬಲಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ರಸ್ತೆಯ ಎಡಭಾಗದಲ್ಲಿ ವಾಹನ ನಿಲುಗಡೆ. ತಿಲಕ್ ನಗರ ರಾಘವೇಂದ್ರಸ್ವಾಮಿ ಮಠದ ರಸ್ತೆಯಿಂದ ಜಿಲ್ಲಾ ಭೋವಿ ಸಮುದಾಯ ಭವನದವರೆಗೆ ಎಡಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ಬಲಭಾಗದಲ್ಲಿ ವಾಹನ ನಿಲುಗಡೆ. ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಕ್ರಾಸ್ ನಿಂದ ಕೆನರಾ ಬ್ಯಾಂಕ್ ಕ್ರಾಸ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ.

ಹೆಲಿಪ್ಯಾಡ್ ಸರ್ಕಲ್ ನಿಂದ ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್ ವರೆಗೆ ವಾಹನ ನಿಲುಗಡೆ ನಿಷೇಧ. ದಿ|| ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ಜ್ಯೋತಿ ಗಾರ್ಡನ್ ನಿಂದ ಆಕಾಶ್ ಇನ್ ಹೋಟೆಲ್ ವರೆಗೆ ವಾಹನ ನಿಲುಗಡೆ ನಿಷೇಧ. ದಿ|| ಪಂಡಿತ್ ದೀನ್ ದಯಾಳ್ ರಸ್ತೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಾಲಾಜಿ ಟೂರ್ಸ್ ಅಂಡ್ ಟ್ರಾವೆಲ್ಸ್‍ವರೆಗೆ ವಾಹನ ನಿಲುಗಡೆ ನಿಷೇಧ. ಕುವೆಂಪು ರಸ್ತೆಯ ಶಿವಶಂಕರ ಗ್ಯಾರೇಜ್‍ನಿಂದ ಬಿ.ಜೆ.ಪಿ ಪಾರ್ಟಿ ಆಫೀಸ್ ಕ್ರಾಸ್‍ವರೆಗೆ ಬಲಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...