Thursday, February 5, 2026
Thursday, February 5, 2026

Veerashaiva Lingayat Mahasabha ಮೂಡಿಗೆರೆಯಲ್ಲಿ ಧಾರ್ಮಿಕ ದುಂದುಭಿ ಕಾರ್ಯಕ್ರಮ

Date:

Veerashaiva Lingayat Mahasabha ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಹಿಳಾ-ಯುವ ಘಟಕ, ಮೂಡಿಗೆರೆ ಹಾಗೂ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಟಾನದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಶ್ರಾವಣ ಮಾಸದ ಧಾರ್ಮಿಕ ದುಂದುಭಿ ಹಾಗೂ ಸಂಗೀತ ಸಂಭ್ರಮದ ಕರಪತ್ರವನ್ನು ಪ್ರತಿಷ್ಟಾನದ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.

ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಪುಷ್ಪಗಿರಿ ಪ್ರತಿಷ್ಟಾನದ ಸಂಸ್ಥಾಪಕ ಅಧ್ಯಕ್ಷ ಮೋಹನ್‌ರಾಜಣ್ಣ ಧಾರ್ಮಿಕ ದುಂದುಭಿ ಹಾಗೂ ಸಂಗೀತ ಸಂಭ್ರಮವು ಸೆ.4ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಮಹಾಂತಿನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಂದಿನ ಕಾರ್ಯಕ್ರಮವನ್ನು ವೀರಶೈ ಮಹಾಸಭಾದ ರಾಜ್ಯ ಕಾರ್ಯದರ್ಶಿ ಶ್ರೀಮತಿ ರಾಜೇಶ್ವರಿ ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಓಂಕಾರ್ ಅಧ್ಯಕ್ಷತೆ ವಹಿಸ ಲಿದ್ದು ಆಧುನಿಕ ವಚನ ರಚನಕಾರ ರುದ್ರಮೂರ್ತಿ ಎಲೆರಾಂಪುರ ಉಪನ್ಯಾಸ ನೀಡಲಿದ್ದಾರೆ.

Veerashaiva Lingayat Mahasabha ವೀರಶೈವ ಮಹಾಸಭಾದ ಜಿಲ್ಲಾ ಉಸ್ತುವಾರಿ ಶ್ರೀಮತಿ ಲೀಲಾ ಮಹೇಶ್, ತಾಲ್ಲೂಕು ಅಧ್ಯಕ್ಷೆ ರಾಜಲಕ್ಷ್ಮೀ ಕಾಂತರಾಜ್, ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷೆ ಉಮಾ ಮೋಹನ್, ಯುವಘಟಕದ ಎಂ.ಸಿ.ಆನoದ್, ಉಪಾಧ್ಯಕ್ಷೆ ಶಾಲಿನಿ ಅನಿಲ್‌ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಪುಷ್ಪಗಿರಿ ಪ್ರತಿಷ್ಟಾನದ ಅಧ್ಯಕ್ಷೆ ಉಮಾ ಮೋಹನ್, ಟ್ರಸ್ಟಿ ಸಿ.ಸಿ.ರಾಜಣ್ಣ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...