Monday, December 15, 2025
Monday, December 15, 2025

Kannada Sahitya Parishat ಕನ್ನಡ ಭಾಷಾಭಿಮಾನವನ್ನ ಮಕ್ಕಳಲ್ಲಿ ಬೆಳೆಸಬೇಕು-ಸಿ.ವಿ.ತಿರುಮಲರಾವ್

Date:

Kannada Sahitya Parishat ಎರಡು ಸಾವಿರ ವರ್ಷದ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯನ್ನು
ಮಾತನಾಡುವ, ವ್ಯವಹರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವುದು
ವಿಷಾದನೀಯ ಸಂಗತಿ. ಕನ್ನಡ ಭಾಷೆ ಉಳಿಸಲು ನಮ್ಮ ಮಕ್ಕಳಿಗೆ ಭಾಷಾಭಿ ಮಾನವನ್ನು
ಇಂದಿನಿಂದಲೇ ಬೆಳಸಬೇಕಾಗಿದೆ ಎಂದು ಶಿಕ್ಷಣ ಇಲಾಖೆಯ ವಿಶ್ರಾಂತ ಜಂಟಿ
ನಿರ್ದೇಶಕರಾದ ಸಿ.ವಿ. ತಿರುಮಲರಾವ್ ಹೇಳಿದರು.

ಅವರು ಶುಕ್ರವಾರ ಚೆನ್ನಗಿರಿ ಪಟ್ಟಣದ ನಿವೃತ್ತ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕನ್ನಡ
ಸಾಹಿತ್ಯ ಪರಿಷತ್ ಹಾಗೂ ಗಂಗಾ ಪ್ಯಾರ ಮೆಡಿಕಲ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ
ಹಮ್ಮಿಕೊಂಡಿದ್ದ ಶ್ರಾವಣ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತರೆ
ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಆದರೆ ಮಾತೃಭಾಷೆ ಮರೆಯಬಾರದು.
ಬೆಂಗಳೂರಿನಲ್ಲಿಯೇ ಕನ್ನಡ ಭಾಷೆ ಹುಡುಕುವ ಪರಿಸ್ಥಿತಿ ಇದ್ದು, ಅನ್ಯ ರಾಜ್ಯದವರು ಕನ್ನಡ
ಮಾತನಾಡದೆ ಅವರದ್ದೇ ಭಾಷೆಯಲ್ಲಿ ವ್ಯವಹರಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಿದಾಗ
ಮಾತ್ರ ನಮ್ಮ ಕನ್ನಡಭಾಷೆ ಉಳಿಯಲಿದೆ ಎಂದರು.

ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಯು.ಚನ್ನಬಸಪ್ಪ ಮಾತನಾಡಿ, ಕಸಾಪ
ಶ್ರಾವಣ ಮಾಸದ ಕವಿಗೋಷ್ಠಿ ನಡೆಸುವ ಮೂಲಕ ಯುವ ಕವಿಗಳನ್ನು ಆಹ್ವಾನಿಸಿ ಅವರ
ಕವಿತೆ ಪ್ರಸ್ತುತ ಪಡಿಸಲಾಗುತ್ತಿದೆ ಎಂದರು.

Kannada Sahitya Parishat ತಾಲೂಕು ಕಸಾಪ ಅಧ್ಯಕ್ಷ ಎಲ್.ಜಿ.ಮಧು
ಕುಮಾರ್‌, ಚನ್ನಗಿರಿ ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ.ಚಿನ್ನಸ್ವಾಮಿ, ಗಂಗಾ ಪ್ಯಾರಾ
ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಬಸವನಗೌಡ, ಲೋಕೇಶ್ವರಯ್ಯ, ಪ್ರಭಾಕರ್,
ಬಿ.ಈ.ಸಿದ್ದಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...