Sunday, December 14, 2025
Sunday, December 14, 2025

Sri Adichunchanagiri Shikshana Trust ಕ್ರೀಡಾ ಪ್ರತಿಭೆಗಳಿಗೆ ಆಶೀರ್ವದಿಸಿದ ಶ್ರೀಪ್ರಸನ್ನನಾಥ ಸ್ವಾಮೀಜಿ

Date:

Sri Adichunchanagiri Shikshana Trust ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ,ಶಿವಮೊಗ್ಗ ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ ) ಶಿವಮೊಗ್ಗ ಶಾಖೆಯ ಗುರುಪುರದ ಬಿ ಜಿ ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಿ ಜಿ ಎಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿ ಯೊಳಗಿನ ಪ್ರೌಢ ಶಾಲಾ ಬಾಲಕ ಮತ್ತು ಬಾಲಕಿಯರು ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ನಮ್ಮ ಶಾಲೆಯ ಬಾಲಕ ಮತ್ತು ಬಾಲಕಿಯರು ಭಾಗವಹಿಸಿ, ಅತ್ಯುತ್ತಮ ಆಟದ ಪ್ರದರ್ಶನ ನೀಡಿ, ಉತ್ತಮ ದಾಳಿ, ಅಷ್ಟೇ ರಕ್ಷಣಾತ್ಮಕ ಆಟ ಆಡಿ, ಬಾಲಕರು ದ್ವಿತೀಯ ಸ್ಥಾನ, ಬಾಲಕಿಯರು ಪ್ರಥಮ ಸ್ಥಾನ ಪಡೆದು, ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.

ದಾವಣಗೆರೆಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿರುವುದು ಮತ್ತೊಂದು ವಿಶೇಷ.

Sri Adichunchanagiri Shikshana Trust ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀಮತಿ ಶೋಭಾ ವೆಂಕಟರಮಣ ಹಾಗೂ ಅಧ್ಯಾಪಕರು, ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...