Friday, March 20, 2026
Friday, March 20, 2026

Dr. Selvamani  ಪ್ರಗತಿಯ ಬಗ್ಗೆ ಸದಾ ಸಂತಸ ವ್ಯಕ್ತಪಡಿಸುವವರೆಂದರೆ ಶಿಕ್ಷಕರು ಮತ್ತು ಪೋಷಕರು- ಡಾ.ಸೆಲ್ವಮಣಿ

Date:

Dr. Selvamani  ಶಿವಮೊಗ್ಗ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಆರ್‍ಆರ್‍ಯು ಶಿವಮೊಗ್ಗ ಕ್ಯಾಂಪಸ್‍ನ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಅವರು ಸರ್ವರನ್ನು ಸ್ವಾಗತಿಸಿ ಮಾತನಾಡಿ, ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯವು ಸಾಂಪ್ರದಾಯಿಕ ರೀತಿಯಲ್ಲಿ 04-09-2023 ಶೈಕ್ಷಣಿಕ ಕಾರ್ಯವನ್ನು ಔಪಚಾರಿಕವಾಗಿ ಪ್ರಾರಂಭಿಸಿದೆ.

ಈ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಭದ್ರತೆ, ಡಿಜಿಟಲ್ ತನಿಖೆ ಮತ್ತು ಪೊಲೀಸ್ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣವನ್ನು ಒದಗಿಸುತ್ತದೆ. ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಪ್ರಮಾಣಪತ್ರ ಮಟ್ಟದ ಶಿಕ್ಷಣವನ್ನು ನೀಡಲಾಗುವುದು.

ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಬಿಮಲ್ ಎನ್ ಪಟೇಲ್ ಅವರು ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸಮ್ಮೇಳನದ ಮೂಲಕ ವಿಶ್ವವಿದ್ಯಾಲಯದ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ತಿಳಿಸಿದರು.

ಇಲ್ಲಿಂದ ಶಿಕ್ಷಣ ಪಡೆದ ನಂತರ ವಿದ್ಯಾರ್ಥಿಗಳು ಪೊಲೀಸ್, ಭದ್ರತಾ ಸೇವೆ ಮತ್ತು ವೈಯಕ್ತಿಕ ಭದ್ರತೆ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶಗಳನ್ನು ಹೊಂದಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮಾತನಾಡಿ, ನಿಮ್ಮ ಪ್ರಗತಿಗೆ ಸದಾ ಸಂತಸ ವ್ಯಕ್ತಪಡಿಸುವ ಜಗತ್ತಿನ ಇಬ್ಬರು ವ್ಯಕ್ತಿಗಳೆಂದರೆ ಶಿಕ್ಷಕರು ಮತ್ತು ಪೋಷಕರು. ಆದ್ದರಿಂದ, ಶಿಕ್ಷಕರ ಸಮರ್ಪಣೆ ಮತ್ತು ಶೈಕ್ಷಣಿಕ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಜಿಲ್ಲಾ ಪೆÇಲೀಸ್ ಅಧೀಕ್ಷಕ ಮಿಥುನ್‍ಕುಮಾರ್ ಮಾತನಾಡಿ, ನೀವು ಈ ವಿಶ್ವವಿದ್ಯಾನಿಲಯದ ಮೊದಲ ಅಧಿವೇಶನದ ವಿದ್ಯಾರ್ಥಿಗಳು, ಇದು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ವಿಶ್ವವಿದ್ಯಾನಿಲಯಕ್ಕೆ ವಿಶೇಷವಾಗಿದೆ. ಇದು ನಿಮಗೆ ಎಂದೆಂದಿಗೂ ವಿಶೇಷವಾಗಿ ಉಳಿಯುತ್ತದೆ.

Dr. Selvamani  ಉತ್ತಮ ಜ್ಞಾನವು ಜೀವನವನ್ನು ಮುಂದಕ್ಕೆ ಕೊಂಡೊಯ್ಯಲು ಸಹಾಯಕವಾಗಿದೆ ಎಂದು ಅವರು ಹೇಳಿದರು. ಮತ್ತು ಮುಂದಿನ ದಿನಗಳಲ್ಲಿ ಈ ವಿಶ್ವವಿದ್ಯಾಲಯವು ದೇಶ ಮಾತ್ರವಲ್ಲದೆ ವಿಶ್ವ ಮಟ್ಟದಲ್ಲಿ ಹೆಸರು ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಣ್ಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆವರಣದಲ್ಲಿ ಸಸಿಗಳನ್ನು ನೆಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...