Thursday, June 18, 2026
Thursday, June 18, 2026

Madhu Bangarappa ಸಚಿವ ಮಧು ಬಂಗಾರಪ್ಪ ಅವರೆದುರು ಶಿಕಾರಿಪುರ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ

Date:

Madhu Bangarappa ಶಿಕಾರಿಪುರ ಕಾಂಗ್ರೆಸ್ ಪಕ್ಷದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ಧ ಕಾರ್ಯಕರ್ತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರ ಪಟ್ಟಣದ ಶಿಶುವಿಹಾರ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿಯ ಉದ್ಘಾಟನೆ ಸಮಾರಂಭವನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಮತ್ತು ಕಿಮ್ಮನೆ ರತ್ನಾಕರ್ ಜಿಲ್ಲಾಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರ ಎದುರಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಕಾರ್ಯಕರ್ತರು ಅಸಮಾಧಾನವನ್ನು ಹೊರಹಾಕಿದ್ದಾರೆ.

ಪಕ್ಷದ ಕಚೇರಿ ಉದ್ಘಾಟನೆ ನಡೆಯುತ್ತಿರುವ ವಿಚಾರ ತಿಳಿದಿದ್ದರೂ ಕೂಡ ಇದೇ ಮಾರ್ಗದಲ್ಲಿ ಸಂಚರಿಸಿದವರು ಕಾರ್ಯಕರ್ತರು ವಿಧವಿಧವಾಗಿ ಬೇಡಿಕೊಂಡರು ಕಾರಿನಿಂದ ಇಳಿಯದೇ ಕಾರ್ಯಕರ್ತರ ಭಾವನೆಗೆ ಸ್ಪಂದಿಸದೆ ಕಾರ್ಯಕರ್ತರಿಗೆ ನೋವುಂಟು ಮಾಡಿ ಹಾಗೆ ಹೋಗಿದ್ದಾರೆ.

ಸೌಜನ್ಯಕ್ಕಾದರೂ ಕೆಳಗೆ ಇಳಿಯಬೇಕಿತ್ತು ಇದು ಸಾಕಷ್ಟು ಬೇಸರಕ್ಕೆ ಕಾರಣವಾಗಿದೆ ಎಂದು ತಾಲುಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಸುಲ್ಮರವರು ಕಾಗೋಡು ತಿಮ್ಮಪ್ಪ ಜಿಲ್ಲಾಧ್ಯಕ್ಷ ಸುಂದರೇಶ್ ಎದುರು ನೋವನ್ನು ತೋಡಿಕೊಂಡರು.

ಈ ಸಂದರ್ಭದಲ್ಲಿ ನೆರದಿದ್ದ ಕಾರ್ಯಕರ್ತರ ಎಲ್ಲ ಜಿಲ್ಲಾಧ್ಯಕ್ಷರಾಗಿ ಮುಗಿಬಿದ್ದು ಮಧು ಬಂಗಾರಪ್ಪ ವಿರುದ್ಧ ಆಕ್ರೋಶ ಅವರ ಹಾಕಿದರು.

Madhu Bangarappa ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಸುಂದರೇಶ್ ಜಿಲ್ಲಾ ಉಸ್ತುವಾರಿ ಸಚಿವರು ತುರ್ತು ಸಭೆ ಇರುವುದರಿಂದ ಹಾಗೆ ಹೋಗಿದ್ದಾರೆ ಇಲ್ಲಿ ಯಾವುದೇ ಬಣ ರಾಜಕೀಯ ಬೇಡ ಏನಿದ್ದರೂ ಕೂತು ಮಾತಾಡಿ ಸರಿ ಮಾಡಿಕೊಳ್ಳೊಣ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...