Sunday, December 14, 2025
Sunday, December 14, 2025

Rotary Shimoga East ಶಿಕ್ಷಣವೆಂದರೆ ಜ್ಞಾನವೃದ್ಧಿ ,ಜೀವನ ಮೌಲ್ಯಗಳ ಅಳವಡಿಕೆ-ವಸಂತ ನಾಯಕ್

Date:

Rotary Shimoga East ಶಿಕ್ಷಣ ಎಂದರೆ ಪದವಿ ಪಡೆಯುವ ಜತೆಯಲ್ಲಿ ತಿಳವಳಿಕೆ, ಜ್ಞಾನ ವೃದ್ಧಿಸಿಕೊಳ್ಳುವುದು, ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯುವುದು ಎಂದು ಧನಂಜಯರಾವ್ ಗಾಡ್ಗಿಲ್ ಇನ್ಸ್ಟಿಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್‌ಮೆಂಟ್ ಮಾಜಿ ನಿರ್ದೇಶಕ ಬಿ.ವಸಂತ ನಾಯಕ ಹೇಳಿದರು.

ಶಿವಮೊಗ್ಗ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಯಕತ್ವದಲ್ಲಿ ಶಿಕ್ಷಣದ ಪಾತ್ರ ವಿಷಯ ಕುರಿತು ಮಾತನಾಡಿ, ಪ್ರತಿಯೊಬ್ಬರಿಂದ ನಾಯಕತ್ವ ಗುಣವನ್ನು ನಾವು ಕಲಿಯುತ್ತೇವೆ. ನಿರಂತರ ಕಲಿಕೆ ಹಾಗೂ ಸಮರ್ಥವಾಗಿ ನಿರ್ವಹಿಸುವ ಗುಣ ನಾಯಕತ್ವ ಮನೋಭಾವ ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಶಿಕ್ಷಣ ತರಬೇತಿಗೂ ತುಂಬಾ ವ್ಯತ್ಯಾಸ ಇದ್ದು, ತರಬೇತಿಯಲ್ಲಿ ವಿವಿಧ ಕೌಶಲ್ಯಗಳನ್ನು ಕಲಿಯುತ್ತೇವೆ. ಆದರೆ ಮನೋಭಾವ ಸದೃಢವಾದರೆ, ಆತ್ಮವಿಶ್ವಾಸದಿಂದ ವರ್ತಿಸಿದಾಗ ನಾಯಕನಾಗಲು ಸಾಧ್ಯ. ದೂರದೃಷ್ಠಿ ಆಲೋಚನೆ ಇರಬೇಕು. ಪ್ರಭಾವ ಬೀರುವ ಶಕ್ತಿ ಇರಬೇಕು. ಸವಾಲುಗಳನ್ನು ಎದುರಿಸುವ ಸಾಮಾರ್ಥ್ಯ ಹೊಂದಿರಬೇಕು ಎಂದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ನಮ್ಮ ಸಂಸ್ಥೆಯು ಉತ್ತಮ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

Rotary Shimoga East ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಸೇರಿದಂತೆ ವಿವಿಧ ಕೌಶಲ್ಯಗಳನ್ನು ಕಲಿಸುವ ಆಶಯದಿಂದ ಉಪನ್ಯಾಸ ಶಿಬಿರಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಆದಿ ಮೂರ್ತಿ, ಮಂಜುನಾಥ್ ರಾವ್ ಕದಂ, ಪರಮೇಶ್ವರ್ ಶಿಗ್ಗಾವ್, ಚಂದ್ರಶೇಖರಯ್ಯ, ಶೇಷಗಿರಿ, ಗಣೇಶ್ ಪ್ರಕಾಶ್, ಶಾರದಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...