Monday, December 15, 2025
Monday, December 15, 2025

Soujanya Murder Case: ಸೌಜನ್ಯ ಪ್ರಕರಣ ಸೂಕ್ತ ತನಿಖೆ ನಡೆಸಲು ಒತ್ತಾಯ

Date:

Soujanya Murder Case: ಉಜಿರೆ ಕಾಲೇಜಿನ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ನೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ.ಸುಂದರಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬoಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಪ್ರಕರಣ ಸಂಬoಧ ಮಾನವ ಹಕ್ಕುಗಳ ಆಯೋಗದ ಮುಖಾಂತರ ಸುಪ್ರಿಂ ಕೋರ್ಟ್ ನ್ಯಾಯಾ ಧೀಶರು ಮತ್ತು ಹೈಕೋರ್ಟ್ನ ನ್ಯಾಯಾಧೀಶರಿಗೆ ಪತ್ರಮುಖೇನ ನ್ಯಾಯಕ್ಕೆ ಒತ್ತಾಯಿಸಲಾಗಿದೆ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ಹೆಚ್ಚಾಗುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೇವಲ ಎರಡು ವರ್ಷಗಳಲ್ಲಿ ಅತಿಹೆಚ್ಚು ಮಹಿಳೆಯರು ಮತ್ತು ಮಕ್ಕಳು ಕಳೆದುಹೋಗಿರುವ ದಾಖಲೆಗಳಿವೆ. ಸತ್ಯ ಕಂಡುಹಿಡಿಯಲು ಭ್ರಷ್ಟ ಮತ್ತು ಒತ್ತಡದ ಸಮಾಜದಲ್ಲಿ ಬಡವರು ನ್ಯಾಯವನ್ನು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಬೇಕಾಗಿರುವುದು ಪ್ರತಿಯೊಬ್ಬರ ನಾಗರೀಕರ ಹಕ್ಕಾಗಿದೆ ಎಂದಿದ್ದಾರೆ.

Soujanya Murder Case: ಕೂಡಲೇ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ನ್ಯಾಯ ವಂಚಿತರಾದ ಸೌಜನ್ಯಳ ಪೋಷ ಕರಿಗೆ ನ್ಯಾಯ ಒದಗಿಸುವ ಮೂಲಕ ಸಂತೋಷ್‌ರಾವ್ ಕುಟುಂಬಕ್ಕೆ ಮಾನವೀಯತೆ ದೃಷ್ಟಿಯಿಂದ ಆಗಿರುವ ನಷ್ಟವನ್ನು ನೀಡುವ ಜೊತೆಗೆ ನಿಜವಾದ ಅಪರಾಧಿಗಳ ಆಸ್ತಿ ಮುಟ್ಟುಗೋಲು ಹಾಕುವ ಮೂಲಕ ನಾಗರೀಕ ಹಕ್ಕುಗಳನ್ನು ನಿರಾಕರಿಸಿ ಸಮಾಜದಿಂದ ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...