Monday, May 4, 2026
Monday, May 4, 2026

Rural Sports Event ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು:ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು

Date:

Rural Sports Event ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಸರ್ಕಾರ ಅವುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಕೂಟ ಆಯೋಜಿಸಿ ಪುನಶ್ಚೇತನಗೊಳಿಸುತ್ತಿದೆ ಎಂದು ಉಪನಿರ್ದೇಶಕರ ಕಚೇರಿ ಶಿಕ್ಷಣಾಧಿಕಾರಿ ಎಸ್.ಆರ್.ಮಂಜುನಾಥ್ ಹೇಳಿದರು.

ಚಿಕ್ಕಮಗಳೂರು, ತಾಲ್ಲೂಕಿನ ಬೆಟ್ಟದಮಳಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವತಿಯಿಂದ ದೇವದಾನದ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಗ್ರಾಮೀಣ ಕ್ರೀಡಾಕೂಟಕ್ಕೆ ಈಚೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ಕೊಡುವ ಸಲುವಾಗಿ ಖೋಖೋ, ಕಬ್ಬಡ್ಡಿ ಸ್ಪರ್ಧೆಗಳನ್ನೊಳಗೊಂಡ ಕ್ರೀಡಾಕೂಟವನ್ನು ಆಯೋಜಿಸಲು ಮುಂದಾಗುತ್ತಿದೆ. ಇದರ ಸದುಪಯೋಗವನ್ನು ಗ್ರಾಮೀಣ ವಿದ್ಯಾರ್ಥಿಗಳು ಪಡೆದುಕೊಳ್ಳುವ ಮೂಲಕ ಕ್ರೀಡಾಸಕ್ತಿ ಬೆಳೆಸಿಕೊಂಡು ರಾಜ್ಯಮಟ್ಟದಲ್ಲಿ ಹೆಸರು ಗಳಿಸಬೇಕು ಎಂದರು.

ತಾಲ್ಲೂಕು ದೈಹಿಕ ಶಿಕ್ಷಕ ಪರಮೇಶ್ವರ್ ಪ್ರಾಸ್ತಾವಿಕ ಮಾತನಾಡಿ ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ ವಾದ ಸಂಗತಿ. ಗೆಲುವು ಕಂಡವರು ಮುಂದಿನ ಹೆಜ್ಜೆಯತ್ತ ದಾಪುಗಾಲು ಇರಿಸಿದರೆ. ಸೋಲುಂಡವರು ಮರಳಿ ಪ್ರಯತ್ನದ ಕಡೆ ಹೆಚ್ಚು ಗಮನಹರಿಸಿದರೆ ಯಶಸ್ಸು ಲಭಿಸಲಿದೆ ಎಂದರು.

Rural Sports Event ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ನಾಗೇಶ್, ಎಸ್‌ಡಿಎಂಸಿ ಅಧ್ಯಕ್ಷ ಸಂಪತ್, ವಿಪತ್ತು ನಿರ್ವಹಣಾ ಘಟಕದ ಚಂದ್ರ ಶೇಖರ್, ಫ್ಲೌಡ್ ಫ್ಯಾಕ್ಟರಿ ಮಾಲೀಕರಾದ ಚಂದಿಲ್ ಕುಮಾರ್, ವೈಶ್ಯ ಹಾಸ್ಟೆಲ್ ಮಾಲೀಕ ರಮೇಶ್, ಕಾಫಿ ಬೆಳೆಗಾರ ನಾಗೇಶ್‌ಗೌಡ, ದೇವದಾನ ಪಿಡಿಓ ದೇವರಾಜ್, ಕೃಷ್ಣಚಾರ್ಯ, ಸಿ.ಆರ್.ಪಿ ಮಹೇಶ್, ಮಾನ್ವಿತಾ, ಪ್ರಕಾಶ್ ಹಾಗೂ ಮತ್ತಿತರರು ಇದ್ದರು.
ಶಾಲೆಯ ಶಿಕ್ಷಕರಾದ ಮಂಜುಳದೇವಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀಮತಿ ಅನುಸೂಯ ಸ್ವಾಗತಿಸಿದರು. ಪುಷ್ಪವತಿ ನಿರೂಪಿಸಿದರು. ವನಜಾಕ್ಷಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...