Monday, February 2, 2026
Monday, February 2, 2026

Uttaradi Math ಹೊಳೆಹೊನ್ನೂರಿನಲ್ಲಿ ಕೃಷ್ಣಾಷ್ಟಮಿ ವಿಶೇಷ ವಿಟ್ಲ ಪಿಂಡಿ ಉತ್ಸವ

Date:

Uttaradi Math ಉತ್ತರಾದಿ ಮಠಾಧಿಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಚಾತುರ್ಮಾಸ ಮಹೋತ್ಸವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಶುಕ್ರವಾರ ಸಂಜೆ ವಿಟ್ಲಪಿಂಡಿ ಮಹೋತ್ಸವ ನಡೆಯಿತು.

ಶ್ರೀಸತ್ಯಧರ್ಮತೀರ್ಥರ ಮಠದ ಮುಂಭಾಗದ ರಸ್ತೆಯಲ್ಲಿ ವಿಟ್ಲಪಿಂಡಿ ಮಹೋತ್ಸವಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಸ್ತೆಯಲ್ಲಿ ಹಲವೆಡೆ ಹಾಲು, ಮೊಸರು, ಬೆಣ್ಣೆ ಇದ್ದಂತಹ ಅಲಂಕೃತ ಮಡಿಕೆಗಳನ್ನು ನೇತು ಹಾಕಲಾಗಿತ್ತು.

ಚಾತುರ್ಮಾಸ ಮಹೋತ್ಸವದ ವಿದ್ವತ್ ಸಭೆಯ ಬಳಿಕ ನೇರವಾಗಿ ವಿಟ್ಲಪಿಂಡಿ ಮಹೋತ್ಸವಕ್ಕೆ ಆಗಮಿಸಿದ ಶ್ರೀಸತ್ಯಾತ್ಮ ತೀರ್ಥರು ನೆರೆದಿದ್ದ ನೂರಾರು ಭಕ್ತರ ಸಮಕ್ಷಮದಲ್ಲಿ ಹಾಲು, ಮೊಸರುಗಳಿದ್ದ ಮಡಿಕೆಗಳನ್ನು ಶ್ರೀಕೃಷ್ಣನ ಬಾಲಲೀಲೆಯ ಸ್ಮರಿಸಿಕೊಂಡು ಹೊಡೆದರು.

Uttaradi Math ಈ ಸಂದರ್ಭದಲ್ಲಿ ಭಕ್ತರು ಹರ್ಷೋದ್ಘಾರ ವ್ಯಕ್ತಪಡಿಸಿದರು. ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಪಂಡಿತರಾದ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು, ಕಲ್ಲಾಪುರ ಜಯತೀರ್ಥಾಚಾರ್ಯ, ಬಾಳಗಾರು ಜಯತೀರ್ಥಾಚಾರ್ಯ, ಮುರಳಿ, ಸತ್ಯನಾರಾಯಣ ನಾಡಿಗ್, ಧೃವಾಚಾರ್, ಜಯತೀರ್ಥ ಬೆಂಗಳೂರು, ಶ್ರೀಪಾದ್ ಶಿವಮೊಗ್ಗ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...