Tuesday, October 1, 2024
Tuesday, October 1, 2024

Uttaradi Math ಹೊಳೆಹೊನ್ನೂರಿನಲ್ಲಿ ಕೃಷ್ಣಾಷ್ಟಮಿ ವಿಶೇಷ ವಿಟ್ಲ ಪಿಂಡಿ ಉತ್ಸವ

Date:

Uttaradi Math ಉತ್ತರಾದಿ ಮಠಾಧಿಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಚಾತುರ್ಮಾಸ ಮಹೋತ್ಸವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಶುಕ್ರವಾರ ಸಂಜೆ ವಿಟ್ಲಪಿಂಡಿ ಮಹೋತ್ಸವ ನಡೆಯಿತು.

ಶ್ರೀಸತ್ಯಧರ್ಮತೀರ್ಥರ ಮಠದ ಮುಂಭಾಗದ ರಸ್ತೆಯಲ್ಲಿ ವಿಟ್ಲಪಿಂಡಿ ಮಹೋತ್ಸವಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಸ್ತೆಯಲ್ಲಿ ಹಲವೆಡೆ ಹಾಲು, ಮೊಸರು, ಬೆಣ್ಣೆ ಇದ್ದಂತಹ ಅಲಂಕೃತ ಮಡಿಕೆಗಳನ್ನು ನೇತು ಹಾಕಲಾಗಿತ್ತು.

ಚಾತುರ್ಮಾಸ ಮಹೋತ್ಸವದ ವಿದ್ವತ್ ಸಭೆಯ ಬಳಿಕ ನೇರವಾಗಿ ವಿಟ್ಲಪಿಂಡಿ ಮಹೋತ್ಸವಕ್ಕೆ ಆಗಮಿಸಿದ ಶ್ರೀಸತ್ಯಾತ್ಮ ತೀರ್ಥರು ನೆರೆದಿದ್ದ ನೂರಾರು ಭಕ್ತರ ಸಮಕ್ಷಮದಲ್ಲಿ ಹಾಲು, ಮೊಸರುಗಳಿದ್ದ ಮಡಿಕೆಗಳನ್ನು ಶ್ರೀಕೃಷ್ಣನ ಬಾಲಲೀಲೆಯ ಸ್ಮರಿಸಿಕೊಂಡು ಹೊಡೆದರು.

Uttaradi Math ಈ ಸಂದರ್ಭದಲ್ಲಿ ಭಕ್ತರು ಹರ್ಷೋದ್ಘಾರ ವ್ಯಕ್ತಪಡಿಸಿದರು. ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಪಂಡಿತರಾದ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು, ಕಲ್ಲಾಪುರ ಜಯತೀರ್ಥಾಚಾರ್ಯ, ಬಾಳಗಾರು ಜಯತೀರ್ಥಾಚಾರ್ಯ, ಮುರಳಿ, ಸತ್ಯನಾರಾಯಣ ನಾಡಿಗ್, ಧೃವಾಚಾರ್, ಜಯತೀರ್ಥ ಬೆಂಗಳೂರು, ಶ್ರೀಪಾದ್ ಶಿವಮೊಗ್ಗ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...