Sunday, December 14, 2025
Sunday, December 14, 2025

JCI Shivamogga ರಕ್ತದಾನದ ಬಗ್ಗೆ ಯಾವುದೇ ಭಯಬೇಡ-ಪೂರ್ಣಿಮಾ ಸುನೀಲ್

Date:

JCI Shivamogga ಆರೋಗ್ಯವಂತ ಯುವಜನರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ರಕ್ತದಾನವು ಜೀವ ಉಳಿಸುವ ಪುಣ್ಯದ ಕಾರ್ಯ ಆಗಿದ್ದು, ರಕ್ತದಾನದ ಬಗ್ಗೆ ಯಾವುದೇ ಭಯ ಬೇಡ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಎದುರಿನಲ್ಲಿರುವ ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಆವರಣದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ, ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘ, ಸಂಜೀವಿನಿ ಬ್ಲಡ್ ಬ್ಯಾಂಕ್ ಹಾಗೂ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ, ನೇತ್ರದಾನ ಶಿಬಿರ ಹಾಗೂ ದೇಹದಾನ ಶಿಬಿರದಲ್ಲಿ ಮಾತನಾಡಿದರು.

ಸದೃಢ ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನವು ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಅರ್ಹ ಇರುವ ಎಲ್ಲರೂ ಕಾಲ ಕಾಲಕ್ಕೆ ರಕ್ತದಾನ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ಕಾಯಕಕ್ಕೆ ನೀವು ಮಾಡುವ ರಕ್ತದಾನ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಕ್ತದಾನ, ನೇತ್ರದಾನ ಹಾಗೂ ದೇಹದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ಜಾಗೃತಿ ಹೊಂದಬೇಕು. ಸೇವಾ ಚಟುವಟಿಕೆಗಳು ಯಶಸ್ವಿ ಆಗಲು ಎಲ್ಲರ ಸಹಕಾರ ಮುಖ್ಯ ಎಂದರು. 200ಕ್ಕೂ ಅಧಿಕ ಜನರು ಭಾಗವಹಿಸಿ ರಕ್ತದಾನ ಮಾಡಿದರು. ಇಬ್ಬರು ದೇಹದಾನ ಹಾಗೂ ಅನೇಕರು ನೇತ್ರದಾನದ ಕಾರ್ಯದಲ್ಲಿ ಭಾಗಿಯಾದರು.

JCI Shivamogga ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಕಾರ್ಯಕ್ರಮ ಸಂಚಾಲಕ ಪ್ರದೀಪ್ ಶಂಕರ್, ಶಂಕರ ಕಣ್ಣಿನ ಆಸ್ಪತ್ರೆಯ ಡಾ. ವಿಶ್ವಾಸ್, ಸಂಜೀವಿನಿ ಬ್ಲಡ್ ಬ್ಯಾಂಕ್‌ನ ದಿನಕರ್, ಶಿವಮೊಗ್ಗ ವೈದ್ಯಕೀಯ ಮಹಾ ವಿದ್ಯಾಲಯದ ಡಾ. ರೇಖಾ, ಟ್ಯಾಕ್ಸಿ ಚಾಲಕರ ಸಂಘದ ಬಿ.ಡಿ.ಗಣೇಶ್, ರಾಘವೇಂದ್ರ, ಸುಧೀರ್ ಮಲ್ಯ, ಅರುಣ್ ಕುಮಾರ್, ಜೆಸಿಐ ಭಾವನಾ ಪದಾಧಿಕಾರಿಗಳು, ಪ್ರವಾಸಿ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...