Wednesday, March 25, 2026
Wednesday, March 25, 2026

JCI Shivamoga ವ್ಯಾಪಾರ ವೃದ್ದಿಗೆ ಪರಸ್ಪರ ಸಹಕಾರ ಅಗತ್ಯ-ಪೂರ್ಣಿಮಾ ಸುನೀಲ್

Date:

JCI Shivamoga ವ್ಯಾಪಾರ ವಹಿವಾಟು ವೃದ್ಧಿಸಿಕೊಳ್ಳಲು ಪ್ರತಿಯೊಬ್ಬರೂ ಪರಸ್ಪರ ಸಹಕಾರ ನೀಡುವುದು ಅತ್ಯಂತ ಮುಖ್ಯ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜೆಸಿ ಸದಸ್ಯರ ಬೈ ಫ್ರಮ್ ಜೆಸಿ ಎಂಬ ಶೀರ್ಷಿಕೆಯಡಿ ಜೆಕಾಂ ಕಾರ್ಯಗಳ ಬಗ್ಗೆ ಮಾತನಾಡಿ, ವ್ಯಾಪಾರ ವಹಿವಾಟು ಹೆಚ್ಚಿಸಿಕೊಳ್ಳುವ ದೃಷ್ಠಿಯಿಂದ ಹೆಚ್ಚು ಜನರ ಸಂಪರ್ಕ ಪರಸ್ಪರ ಪರಿಚಯ ಮುಖ್ಯ ಆಗಿರುತ್ತದೆ. ಇದರಿಂದ ಉದ್ಯಮಗಳಲ್ಲಿ ಯಶಸ್ಸು ಕಾಣಬಹುದಾಗಿದೆ ಎಂದು ತಿಳಿಸಿದರು.

ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ ಮಾತನಾಡಿ, ಜೆ ಸಿ ಸದಸ್ಯರ ವ್ಯವಹಾರವನ್ನು ಮತ್ತಷ್ಟು ವೃದ್ಧಿಗೊಳಿಸಲು ಕೆಲವೊಂದು ವ್ಯವಹಾರಿಕ ಸಂಬಂಧಗಳ ವಿಷಯದ ಕುರಿತು ಜೆ ಸಿ ಸಂಸ್ಥೆಯು ನಿರಂತರ ಮಾರ್ಗದರ್ಶನ ನೀಡುವ ವಿಶೇಷ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಜೆಸಿ ಸಂಸ್ಥೆಯ ಮತ್ತೊಂದು ವಿಭಾಗವಾದ ವ್ಯವಹಾರಕ್ಕೆ ಸಂಬಂಧಿಸಿದ ಜೆಕಾಂ ಕಾರ್ಯಗಳ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಸದಸ್ಯೆ ಸ್ಮಿತಾ ಶಿವಕುಮಾರ್ ಅವರು ಗಾಂಧಿ ಬಜಾರ್ ನಲ್ಲಿ ಇರುವ ದೋಸೆ ಕ್ಯಾಂಪ್, ಏರ್‌ಪೋರ್ಟ್ ರಸ್ತೆಯಲ್ಲಿರುವ ಅಶ್ವಿನಿ ಅವರ ಬಿಗ್ ಬ್ಯೂಟಿ ಪಾರ್ಲರ್ ಹಾಗೂ ಕರಿಬಸಮ್ಮ ಅವರ ಸೀರೆ ವ್ಯಾಪಾರವನ್ನು ಯಾವ ರೀತಿ ವೃದ್ಧಿಸಿಕೊಳ್ಳಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು.

JCI Shivamoga ಈ ಸಂದರ್ಭದಲ್ಲಿ ಜೈತ್ರ ಹಬ್ಬದ ಕೋಆರ್ಡಿನೇಟರ್ ಪ್ರದೀಪ್ ಹಾಗೂ ಭಾವನದ ಎಲ್ಲ ಸದಸ್ಯರು ಪಾಲ್ಗೊಂಡು ವ್ಯವಹಾರ ವೃದ್ಧಿಸುವಲ್ಲಿ ಪರಸ್ಪರ ಸಹಕರಿಸುತ್ತೇವೆ ಎಂದು ಮಾಹಿತಿ ಹಂಚಿಕೊoಡರು.

ಜೆಸಿಐ ಶಿವಮೊಗ್ಗ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...