Saturday, September 28, 2024
Saturday, September 28, 2024

JCI Shivamoga ವ್ಯಾಪಾರ ವೃದ್ದಿಗೆ ಪರಸ್ಪರ ಸಹಕಾರ ಅಗತ್ಯ-ಪೂರ್ಣಿಮಾ ಸುನೀಲ್

Date:

JCI Shivamoga ವ್ಯಾಪಾರ ವಹಿವಾಟು ವೃದ್ಧಿಸಿಕೊಳ್ಳಲು ಪ್ರತಿಯೊಬ್ಬರೂ ಪರಸ್ಪರ ಸಹಕಾರ ನೀಡುವುದು ಅತ್ಯಂತ ಮುಖ್ಯ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜೆಸಿ ಸದಸ್ಯರ ಬೈ ಫ್ರಮ್ ಜೆಸಿ ಎಂಬ ಶೀರ್ಷಿಕೆಯಡಿ ಜೆಕಾಂ ಕಾರ್ಯಗಳ ಬಗ್ಗೆ ಮಾತನಾಡಿ, ವ್ಯಾಪಾರ ವಹಿವಾಟು ಹೆಚ್ಚಿಸಿಕೊಳ್ಳುವ ದೃಷ್ಠಿಯಿಂದ ಹೆಚ್ಚು ಜನರ ಸಂಪರ್ಕ ಪರಸ್ಪರ ಪರಿಚಯ ಮುಖ್ಯ ಆಗಿರುತ್ತದೆ. ಇದರಿಂದ ಉದ್ಯಮಗಳಲ್ಲಿ ಯಶಸ್ಸು ಕಾಣಬಹುದಾಗಿದೆ ಎಂದು ತಿಳಿಸಿದರು.

ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ ಮಾತನಾಡಿ, ಜೆ ಸಿ ಸದಸ್ಯರ ವ್ಯವಹಾರವನ್ನು ಮತ್ತಷ್ಟು ವೃದ್ಧಿಗೊಳಿಸಲು ಕೆಲವೊಂದು ವ್ಯವಹಾರಿಕ ಸಂಬಂಧಗಳ ವಿಷಯದ ಕುರಿತು ಜೆ ಸಿ ಸಂಸ್ಥೆಯು ನಿರಂತರ ಮಾರ್ಗದರ್ಶನ ನೀಡುವ ವಿಶೇಷ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಜೆಸಿ ಸಂಸ್ಥೆಯ ಮತ್ತೊಂದು ವಿಭಾಗವಾದ ವ್ಯವಹಾರಕ್ಕೆ ಸಂಬಂಧಿಸಿದ ಜೆಕಾಂ ಕಾರ್ಯಗಳ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಸದಸ್ಯೆ ಸ್ಮಿತಾ ಶಿವಕುಮಾರ್ ಅವರು ಗಾಂಧಿ ಬಜಾರ್ ನಲ್ಲಿ ಇರುವ ದೋಸೆ ಕ್ಯಾಂಪ್, ಏರ್‌ಪೋರ್ಟ್ ರಸ್ತೆಯಲ್ಲಿರುವ ಅಶ್ವಿನಿ ಅವರ ಬಿಗ್ ಬ್ಯೂಟಿ ಪಾರ್ಲರ್ ಹಾಗೂ ಕರಿಬಸಮ್ಮ ಅವರ ಸೀರೆ ವ್ಯಾಪಾರವನ್ನು ಯಾವ ರೀತಿ ವೃದ್ಧಿಸಿಕೊಳ್ಳಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು.

JCI Shivamoga ಈ ಸಂದರ್ಭದಲ್ಲಿ ಜೈತ್ರ ಹಬ್ಬದ ಕೋಆರ್ಡಿನೇಟರ್ ಪ್ರದೀಪ್ ಹಾಗೂ ಭಾವನದ ಎಲ್ಲ ಸದಸ್ಯರು ಪಾಲ್ಗೊಂಡು ವ್ಯವಹಾರ ವೃದ್ಧಿಸುವಲ್ಲಿ ಪರಸ್ಪರ ಸಹಕರಿಸುತ್ತೇವೆ ಎಂದು ಮಾಹಿತಿ ಹಂಚಿಕೊoಡರು.

ಜೆಸಿಐ ಶಿವಮೊಗ್ಗ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...