Monday, February 2, 2026
Monday, February 2, 2026

Breaking News ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳೂ ತೀವ್ರ ಬರಪೀಡಿತ ಪ್ರದೇಶ : ಸರ್ಕಾರಿ ಆದೇಶ

Date:

Breaking News

ಸರ್ಕಾರದ ಆದೇಶದ ಸಂಖ್ಯೆ ಕಂ. ಇ. 449 ಟಿ ಎನ್ ಆರ್ 2023, ಸೆಪ್ಟೆಂಬರ್ 13 ರ 2023ರ ಪ್ರಕಾರ ಕೇಂದ್ರ ಸರ್ಕಾರ ಬರ ನಿರ್ವಹಣಾ ಕೈಪಿಡಿ 2020 ರ ಘೋಷಣೆ ಮಾರ್ಗಸೂಚಿಯಂತೆ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ ವರದಿ ಅನುಸಾರವಾಗಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕಿನಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ.

ಈ ಪೈಕಿ 161 ತಾಲೂಕುಗಳನ್ನ ತೀವ್ರ ಬರಪೀಡಿತ ತಾಲೂಕುಗಳು ( ಅನುಬಂಧ -1) ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು (ಅನುಬಂಧ -2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೋ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/ NDRF ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಕಂದಾಯ ಇಲಾಖೆಯ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.

Breaking News ಅನುಬಂಧ-1ರಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಶಿವಮೊಗ್ಗ, ತಾಲೂಕುಗಳನ್ನ ಸೇರಿಸಿ, ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...