Sunday, August 2, 2026
Sunday, August 2, 2026

Breaking News ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳೂ ತೀವ್ರ ಬರಪೀಡಿತ ಪ್ರದೇಶ : ಸರ್ಕಾರಿ ಆದೇಶ

Date:

Breaking News

ಸರ್ಕಾರದ ಆದೇಶದ ಸಂಖ್ಯೆ ಕಂ. ಇ. 449 ಟಿ ಎನ್ ಆರ್ 2023, ಸೆಪ್ಟೆಂಬರ್ 13 ರ 2023ರ ಪ್ರಕಾರ ಕೇಂದ್ರ ಸರ್ಕಾರ ಬರ ನಿರ್ವಹಣಾ ಕೈಪಿಡಿ 2020 ರ ಘೋಷಣೆ ಮಾರ್ಗಸೂಚಿಯಂತೆ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ ವರದಿ ಅನುಸಾರವಾಗಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕಿನಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ.

ಈ ಪೈಕಿ 161 ತಾಲೂಕುಗಳನ್ನ ತೀವ್ರ ಬರಪೀಡಿತ ತಾಲೂಕುಗಳು ( ಅನುಬಂಧ -1) ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು (ಅನುಬಂಧ -2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೋ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/ NDRF ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಕಂದಾಯ ಇಲಾಖೆಯ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.

Breaking News ಅನುಬಂಧ-1ರಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಶಿವಮೊಗ್ಗ, ತಾಲೂಕುಗಳನ್ನ ಸೇರಿಸಿ, ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...