Sunday, December 14, 2025
Sunday, December 14, 2025

Rashtriya Raksha university ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಒತ್ತಡ ನಿರ್ವಹಣೆ ತರಬೇತಿ

Date:

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ಡಾ.ಆನಂದ್ ಕುಮಾರ್ ತ್ರಿಪಾಠಿ ಮತ್ತು ಹೊಸದಾಗಿ ನೇಮಕಗೊಂಡಿರುವ ಕ್ಯಾಂಪಸ್ ನಿರ್ದೇಶಕ ರಮಾನಂದ್ ಗಾರ್ಗಿ, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಬುಧವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದರು.

ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಆರ್ ಸ್ವಾಗತಿಸಿ, 2023 ರ ಮಾರ್ಚ್‍ನಲ್ಲಿ ಸ್ಥಾಪನೆಗೊಂಡಿರುವ ಆರ್‍ಆರ್‍ಯು(ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ)ದ ದೃಷ್ಟಿಕೋನ ಮತ್ತು ಧ್ಯೇಯದ ಕುರಿತು ಸಿಬ್ಬಂದಿಗಳಿಗೆ ಪರಿಚಯಿಸಿದರು. ಇದೊಂದು ಹೆಮ್ಮೆಯ ಸಂಸ್ಥೆಯಾಗಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡುತ್ತದೆ ಎಂದರು.

ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುವುದು ಒತ್ತಡಭರಿತ ಕೆಲಸವಾಗಿದ್ದು ಇದನ್ನು ನಿರ್ವಹಿಸಲು ವೈಜ್ಞಾನಿಕ ಸಾಧನಗಳ ಅವಶ್ಯಕತೆ ಇರುತ್ತದೆ. ಆರ್‍ಆರ್‍ಯು ಈ ನಿಟ್ಟಿನಲ್ಲಿ ಒತ್ತಡ ನಿರ್ವಹಣೆ ಕುರಿತು ಸಿಬ್ಬಂದಿಗಳಿಗೆ ತರಬೇತಿ ನೀಡಲಿದೆ ಎಂದ ಅವರು ಆರ್‍ಆರ್‍ಯು ಗೆ ಉತ್ತಮ ಯಶಸ್ಸು ಲಭಿಸಲಿ ಹಾಗೂ ತಮ್ಮ ಕಡೆಯಿಂದ ಎಲ್ಲ ರೀತಿಯ ಸಮನ್ವಯ ಮತ್ತು ಬೆಂಬಲವನ್ನು ನೀಡುವುದಾಗಿ ತಿಳಿಸಿದರು.

ಕ್ಯಾಂಪಸ್ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಮಾತನಾಡಿ, ನ್ಯಾಯದಾನದಲ್ಲಿ ಕಾರಾಗೃಹದ ಪಾತ್ರ ಅತ್ಯಗತ್ಯವಾಗಿದೆ ಎಂದ ಅವರು ಕಾರಾಗೃಹ ಮತ್ತು ಸಿಬ್ಬಂದಿಗಳ ಮಹತ್ವವನ್ನು ತಿಳಿಸಿದರು.
ಕ್ಯಾಂಪಸ್ ನಿರ್ದೇಶಕ ರಮಾನಂದ ಗಾರ್ಗಿ ಮಾತನಾಡಿ, ಒತ್ತಡ ನಿರ್ವಹಣೆ ಸುಲಭದ ಕೆಲಸವಲ್ಲ. ಆದರೆ ಶಾಂತಿಯುತ ಜೀವನ ನಡೆಸಲು ನಾವು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕೆಂದರು.

Rashtriya Raksha university ಈ ತರಬೇತಿ ಕಾರ್ಯಕ್ರಮದಲ್ಲಿ ಆರ್‍ಆರ್‍ಯು ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಡಾ.ನಂದಕುಮಾರ್ ಪೂಜಂ ಮಾತನಾಡಿ, ಒತ್ತಡ ಮತ್ತು ಅದು ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ದುಷ್ಪರಿಣಾಮದ ಕುರಿತು ವಿವರಣೆ ನೀಡಿದ ಅವರು ಒತ್ತಡ ನಿರ್ವಹಿಸುವ ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಸಿಬ್ಬಂದಿಗಳನ್ನು ತೊಡಗಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...