Tuesday, May 14, 2024
Tuesday, May 14, 2024

Rashtriya Raksha university ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಒತ್ತಡ ನಿರ್ವಹಣೆ ತರಬೇತಿ

Date:

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ಡಾ.ಆನಂದ್ ಕುಮಾರ್ ತ್ರಿಪಾಠಿ ಮತ್ತು ಹೊಸದಾಗಿ ನೇಮಕಗೊಂಡಿರುವ ಕ್ಯಾಂಪಸ್ ನಿರ್ದೇಶಕ ರಮಾನಂದ್ ಗಾರ್ಗಿ, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಬುಧವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕುರಿತು ತರಬೇತಿ ನೀಡಿದರು.

ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಆರ್ ಸ್ವಾಗತಿಸಿ, 2023 ರ ಮಾರ್ಚ್‍ನಲ್ಲಿ ಸ್ಥಾಪನೆಗೊಂಡಿರುವ ಆರ್‍ಆರ್‍ಯು(ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ)ದ ದೃಷ್ಟಿಕೋನ ಮತ್ತು ಧ್ಯೇಯದ ಕುರಿತು ಸಿಬ್ಬಂದಿಗಳಿಗೆ ಪರಿಚಯಿಸಿದರು. ಇದೊಂದು ಹೆಮ್ಮೆಯ ಸಂಸ್ಥೆಯಾಗಿದ್ದು, ಗುಣಮಟ್ಟದ ಶಿಕ್ಷಣವನ್ನು ನೀಡುತ್ತದೆ ಎಂದರು.

ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುವುದು ಒತ್ತಡಭರಿತ ಕೆಲಸವಾಗಿದ್ದು ಇದನ್ನು ನಿರ್ವಹಿಸಲು ವೈಜ್ಞಾನಿಕ ಸಾಧನಗಳ ಅವಶ್ಯಕತೆ ಇರುತ್ತದೆ. ಆರ್‍ಆರ್‍ಯು ಈ ನಿಟ್ಟಿನಲ್ಲಿ ಒತ್ತಡ ನಿರ್ವಹಣೆ ಕುರಿತು ಸಿಬ್ಬಂದಿಗಳಿಗೆ ತರಬೇತಿ ನೀಡಲಿದೆ ಎಂದ ಅವರು ಆರ್‍ಆರ್‍ಯು ಗೆ ಉತ್ತಮ ಯಶಸ್ಸು ಲಭಿಸಲಿ ಹಾಗೂ ತಮ್ಮ ಕಡೆಯಿಂದ ಎಲ್ಲ ರೀತಿಯ ಸಮನ್ವಯ ಮತ್ತು ಬೆಂಬಲವನ್ನು ನೀಡುವುದಾಗಿ ತಿಳಿಸಿದರು.

ಕ್ಯಾಂಪಸ್ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಮಾತನಾಡಿ, ನ್ಯಾಯದಾನದಲ್ಲಿ ಕಾರಾಗೃಹದ ಪಾತ್ರ ಅತ್ಯಗತ್ಯವಾಗಿದೆ ಎಂದ ಅವರು ಕಾರಾಗೃಹ ಮತ್ತು ಸಿಬ್ಬಂದಿಗಳ ಮಹತ್ವವನ್ನು ತಿಳಿಸಿದರು.
ಕ್ಯಾಂಪಸ್ ನಿರ್ದೇಶಕ ರಮಾನಂದ ಗಾರ್ಗಿ ಮಾತನಾಡಿ, ಒತ್ತಡ ನಿರ್ವಹಣೆ ಸುಲಭದ ಕೆಲಸವಲ್ಲ. ಆದರೆ ಶಾಂತಿಯುತ ಜೀವನ ನಡೆಸಲು ನಾವು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕೆಂದರು.

Rashtriya Raksha university ಈ ತರಬೇತಿ ಕಾರ್ಯಕ್ರಮದಲ್ಲಿ ಆರ್‍ಆರ್‍ಯು ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಡಾ.ನಂದಕುಮಾರ್ ಪೂಜಂ ಮಾತನಾಡಿ, ಒತ್ತಡ ಮತ್ತು ಅದು ದೇಹ ಹಾಗೂ ಮನಸ್ಸಿನ ಮೇಲೆ ಬೀರುವ ದುಷ್ಪರಿಣಾಮದ ಕುರಿತು ವಿವರಣೆ ನೀಡಿದ ಅವರು ಒತ್ತಡ ನಿರ್ವಹಿಸುವ ತಂತ್ರಗಳ ಕುರಿತು ಪ್ರಾಯೋಗಿಕವಾಗಿ ಸಿಬ್ಬಂದಿಗಳನ್ನು ತೊಡಗಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prajwal Revanna ಪ್ರಜ್ವಲ್ ರೇವಣ್ಣ ಅವರಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನದ ಟಿಕೆಟ್ ಕ್ಯಾನ್ಸಲ್?

Prajwal Revanna ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ...

Shankaracharya Jayanti ವಿಜಯನಗರದಲ್ಲಿಅಂಬಾರಿ ಗೌರವದೊಂದಿಗೆ ಶಂಕರ ಜಯಂತಿ ಆಚರಣೆ

ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ Shankaracharya Jayanti ವೈಶಾಖ...

Online Fraud ಆನ್ ಲೈನ್ ಮೂಲಕ ನೌಕರಿ ಭರವಸೆಯಿಂದ ಮೋಸ ಹೋದ ಯುವತಿ

Online Fraud ಇಲ್ಲೊಬ್ಬ ಯುವತಿ ಆನ್ ಲೈನ್ ಮೋಸಕ್ಕೆ ಬಲಿಯಾಗಿದ್ದಾಳೆ. ಟೆಲಿಗ್ರಾಂ...

Karnataka Police ಸೌಳಿ ಗ್ರಾಮಕ್ಕೆ ನೀರು ಪೂರೈಸುವ ಪೈಪುಗಳ ಅಪಹರಣ

Karnataka Police ತೀರ್ಥಹಳ್ಳಿ ತಾಲೂಕಿನ ಸೌಳಿ ಗ್ರಾಮದ ಸಮೀಪ ಮಾಲತಿ ನದಿ...