Monday, February 2, 2026
Monday, February 2, 2026

Health Center ನಗರದ ವಾರ್ಡ್ ಗಳಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲು ಒತ್ತಾಯ

Date:

Health Center ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರ ನಿವಾಸಿಗಳಿಗೆ ವಾರ್ಡ್ ನಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸುವ ಮೂಲಕ ತುರ್ತು ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲ ಕಲ್ಪಿಸಿ ಕೊಡಬೇಕು ಎಂದು ನಗರಸಭಾ ಸದಸ್ಯರು ಆರೋಗ್ಯ ಸಚಿವ ದಿನೇಶ್‌ಗುಂಡುರಾವ್ ಅವರನ್ನು ಗುರುವಾರ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಉಪ್ಪಳ್ಳಿ ನಗರಸಭಾ ಸದಸ್ಯ ಮುನೀರ್ ಅಹ್ಮದ್ ನಗರದ ಉಪ್ಪಳ್ಳಿ, ಕಲ್ಲುದೊಡ್ಡಿ, ಶಾಂತಿನಗರ , ಇಂದಿರಾಗಾAಧಿ ಹಾಗೂ ರಾಜೀವ್‌ಗಾಂಧಿ ಬಡಾವಣೆಯಲ್ಲಿ 18 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು ಆರೋಗ್ಯ ಸಮಸ್ಯೆ ಎದುರಾದರೆ 5 ಕಿ.ಮೀ. ಸಂಚರಿಸಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಪ್ರಸ್ತುತ ಈ ಬಡಾವಣೆಗಳಲ್ಲಿ ಅತಿಹೆಚ್ಚು ಕೂಲಿಕಾರ್ಮಿಕರು, ಡೊಂಗ್ರಿ ಗೇರೇಷಿಯಾ ಹಾಗೂ ಹಕ್ಕಿಪಿಕ್ಕಿ ಜನಾಂಗ ಸೇರಿದಂತೆ ಮಧ್ಯಮ ವರ್ಗದವರೇ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ರೋಗರುಜಿನಿಗಳಿಗೆ ತುತ್ತಾಗುವ ಸಂದರ್ಭವಿರುವುದರಿoದ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಆ ನಿಟ್ಟಿನಲ್ಲಿ ಉಪ್ಪಳ್ಳಿ ವಾರ್ಡ್ಗಳಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಿದರೆ ಸ್ಥಳೀಯ ಹಾಗೂ ಸುತ್ತಮುತ್ತಲಿನ ನರಗನಹಳ್ಳಿ, ಬ್ಯಾಗದಹಳ್ಳಿ ಗ್ರಾಮಸ್ಥರಿಗೂ ಬಹಳಷ್ಟು ಅನುಕೂಲವಾಗುವ ಜೊತೆಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾಗಲು ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

Health Center ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಅಲ್ಪಸಂಖ್ಯಾತರ ಘಟಕದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ನಯಾಜ್ ಅಹ್ಮದ್, ಚಿಕ್ಕಮಗಳೂರು ನಗರಸಭಾ ಸದಸ್ಯರಾದ ಖಜಂಧರ್ ಮೋನು, ಜಾವೀದ್, ಶಾದಂ ಅಲಂ, ಪರಮೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...