Thursday, June 18, 2026
Thursday, June 18, 2026

Bhadravati VISL ಭದ್ರಾವತಿ ವಿಐಎಸ್ಎಲ್ ನಲ್ಲಿ ಸರ್ ಎಂವಿ ಜಯಂತಿ ಆಚರಣೆ

Date:

Bhadravati VISL ಅತ್ಯುತ್ತಮ ಇಂಜಿನೀಯರ್, ರಾಜನೀತಿಙ್ಞ, ದಾರ್ಶನಿಕ, ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನವನ್ನು ಇಂಜಿನೀರ‍್ಸ್ ದಿನಾಚರಣೆಯನ್ನಾಗಿ ಅಚರಿಸಿ, ದಿನಾಂಕ 15-9-2023 ರಂದು ವಿಐಎಸ್‌ಪಿಯ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.

ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಶ್ರೀ ಅಜಯ್ ಸೋಮ್‌ಕುವಾರ್, ಪ್ರಧಾನ ಕಾರ್ಯದರ್ಶಿ, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಇವರುಗಳು ವಿಐಎಸ್‌ಪಿ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾನ್ ವ್ಯಕ್ತಿತ್ವಕ್ಕೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

Bhadravati VISL ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದರಾದ ಮಾನ್ಯ ಶ್ರೀ ಬಿ.ವೈ.ರಾಘವೇಂದ್ರರವರೂ ಸಹ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಮ್ಮ ಗೌರವ ಸೂಚಿಸಿ, ನೆರೆದ ಸಮೂಹವನ್ನುದ್ದೇಶಿಸಿ ಮಾತನಾಡಿದರು.

ವಿಐಎಸ್‌ಎಲ್ ಸಮುದಾಯದವರು ಮಾನ್ಯ ಸಂಸದರನ್ನು ಸನ್ಮಾನಮಾಡಿ ಗೌರವ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...