Thursday, June 18, 2026
Thursday, June 18, 2026

University of Agricultural and Horticultural Sciences, Shimoga ಪ್ರಗತಿಪರ ರೈತ/ ಮಹಿಳೆ ಪ್ರಶಸ್ತಿಗಾಗಿ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಅರ್ಜಿ ಆಹ್ವಾನ

Date:

University of Agricultural and Horticultural Sciences, Shimoga ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವವಿದ್ಯಾಲಯ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್ 2023ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು.

ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅಥವಾ https://www.uahs.edu.in ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಅ.30 ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಸಹ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ ಇವರನ್ನು ಸಂಪರ್ಕಿಸಬೇಕಾದ ಸಂಖ್ಯೆಗಳು: ಶಿವಮೊಗ್ಗ-9480838976,82779332600. ದಾವಣಗೆರೆ-9480838209. ಚಿಕ್ಕಮಗಳೂರು- 9480838203. ಉಡುಪಿ- 9480838202. 8277932500.

University of Agricultural and Horticultural Sciences, Shimoga ಚಿತ್ರದುರ್ಗ– 9480838201.

ದಕ್ಷಿಣ ಕನ್ನಡ-8794706468, ಮಡಿಕೇರಿ- 948083821

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...