Wednesday, October 2, 2024
Wednesday, October 2, 2024

Postal Department Employees’ Co-operative Society ಚಿಕ್ಕಮಗಳೂರು ಅಂಚೆ ಇಲಾಖೆ ನೌಕರರ ಸಹಕಾರ ಸಂಘಕ್ಕೆ ವಾರ್ಷಿಕ ₹ 15 ಲಕ್ಷ ಲಾಭ

Date:

Postal Department Employees’ Co-operative Societyಅಂಚೆ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘವು ಪ್ರಸ್ತುತ ಸಾಲಿನಲ್ಲಿ 15 ಲಕ್ಷ ರೂ. ನಿವ್ವಳ ಲಾಭಗಳಿಸುವ ಮೂಲಕ ಆರ್ಥಿಕವಾಗಿ ಮುನ್ನೆಡೆಯುತ್ತಿದೆ ಎಂದು ಸಂಘದ ಅಧ್ಯಕ್ಷ ಸಿ.ಭಾಸ್ಕರ್ ಹೇಳಿದರು.

ಚಿಕ್ಕಮಗಳೂರು ನಗರದ ಶಾರದಾ ಪೈ ಕಲ್ಯಾಣ ಮಂಟಪದಲ್ಲಿ ಚಿಕ್ಕಮಗಳೂರು ಅಂಚೆ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘದಲ್ಲಿ ಈಗಾಗಲೇ ಸದಸ್ಯರಿಗೆ 2.5 ಕೋಟಿಗೂ ಹೆಚ್ಚು ಸಾಲ ವಿತರಿಸಿ ಬಳಿಕ ಶೇ.90ರಷ್ಟು ಸಾಲವನ್ನು ವಸೂಲಿ ಮಾಡಲಾಗಿದೆ. ಪ್ರಸ್ತುತ ಸಂಘದಲ್ಲಿ 1300ಕ್ಕೂ ಹೆಚ್ಚು ಮಂದಿ ಸದಸ್ಯರಾಗಿರುವುದು ಸಂಘದ ಬೆಳವಣ ಗೆಗೆ ಮೂಲ ಕಾರಣವಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಸಂಘಕ್ಕೆ ಸ್ವಂತ ಕಟ್ಟಡ ಸ್ಥಾಪಿಸುವ ಗುರಿ ಹೊಂದಿದ್ದು ಅದರಂತೆ ಒಂದು ನಿವೇಶನ ಅಥವಾ ಕಟ್ಟಡವನ್ನು ಖರೀದಿ ಮಾಡಲು ತೀರ್ಮಾನಿಸಿದ್ದು ಕೆಲವೇ ದಿನಗಳಲ್ಲಿ ಕಾರ್ಯಕತಕ್ಕೆ ಮುಂದಾಗಲಾಗುವುದು ಎಂದು ಹೇಳಿದರು.

Postal Department Employees’ Co-operative Society ಸಂಘದ ಸದಸ್ಯರು ಅತಿಹೆಚ್ಚು ಸಂಖ್ಯೆಯಲ್ಲಿ ಸಂಘಕ್ಕೆ ಠೇವಣ ಇರಿಸಿದರೆ ಸಂಘವು ಆರ್ಥಿಕವಾಗಿ ಮುಂದು ವರೆಯಲು ಸಾಧ್ಯ. ಜೊತೆಗೆ ಸಂಕಷ್ಟದಲ್ಲಿರುವ ಸದಸ್ಯರುಗಳಿಗೆ ಸಾಲ ವಿತರಿಸಿ ಅವರಿಂದ ಬರುವಂತಹ ಬಡ್ಡಿಯಿಂದ ಸಂಘವು ಹಾಗೂ ಸದಸ್ಯರು ಉತ್ತಮವಾಗಿ ಬೆಳವಣ ಗೆಯಾಗಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ನಾಗಭೂಷಣ್, ನಿರ್ದೇಶಕರುಗಳಾದ ಹೆಚ್.ಎಲ್.ಪ್ರಸನ್ನ ಕುಮಾರ್, ಹೆಚ್.ಟಿ.ಮಂಜಪ್ಪ, ಎಂ.ಸುಧಾ, ಬಿ.ಎನ್.ಸಚಿನ್‌ಕುಮಾರ್, ಎಸ್.ಡಿ.ಮಂಜಪ್ಪ, ಟಿ.ಎಸ್.ಬಸವರಾಜ್, ಬಿ.ಎಂ.ನಾಗರಾಜ್, ಹೆಚ್.ಸುಬ್ರಮಣ್ಯ, ರೋವಿನ ಮೇರಿ ಅನಿತಾ, ಆರ್.ಶ್ರೀನಿವಾಸ್, ಸೌರಭ್ ಆಸ್ಟಿಕರ್, ಬಿ. ಮಂಜಪ್ಪ, ಘನಲಿಂಗಮೂರ್ತಿ, ಸಿ.ಎಸ್.ಶಶಿಕುಮಾರ್, ಕಾರ್ಯದರ್ಶಿ ಮಧು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....