Monday, May 4, 2026
Monday, May 4, 2026

Poshan Abhiyan ಮಕ್ಕಳು ಹಸಿವಿನಿಂದ ಬಳಲಬಾರದು ಪೌಷ್ಠಿಕ ಆಹಾರ ಸೇವಿಸಬೇಕು-ಮುನೀರ್ ಅಹ್ಮದ್

Date:

Poshan Abhiyan ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಶೀಲತೆಗಳಿಗೆ ಪೌಷ್ಠಿಕ ಆಹಾರಗಳು ಅಗತ್ಯವಿದ್ದು ಮಕ್ಕಳು ಅಪೌಷ್ಠಿಕತೆಯಿಂದ ಬಳಲದಂತೆ ಆಹಾರವನ್ನು ನೀಡುವುದರೊಂದಿಗೆ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು ಚಿಕ್ಕಮಗಳೂರು ನಗರಸಭಾ ಸದಸ್ಯ ಮುನೀರ್ ಅಹ್ಮದ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಶಿಶು ಅಭಿವೃದಿ ಯೋಜನೆ ವತಿಯಿಂದ ನಗರದ ಉಪ್ಪಳ್ಳಿ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನದ ಮಾಸಾಚರಣೆ ಕಾರ್ಯಕ್ರಮವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ತರಕಾರಿಗಳನ್ನು ತೆಗೆದಿಟ್ಟು ಊಟ ಮಾಡುತ್ತಿರುವ ಬೆಳವಣಿಗೆ ಹೆಚ್ಚಾಗುತ್ತಿದೆ. ರಾಗಿ, ನವಣೆ ಸೇರಿದಂತೆ ಮೊದಲಾದ ಧಾನ್ಯಗಳ ಬಳಕೆ ಹೆಚ್ಚಾಗಬೇಕಿದೆ. ಮಕ್ಕಳು ಹಸಿವಿನಿಂದ ಬಳಲಬಾರದು. ಪೌಷ್ಠಿಕಾಂಶ ಆಹಾರವನ್ನು ಸೇವಿಸುವ ಮೂಲಕ ಆಹಾರ ಪದಾರ್ಥಗಳನ್ನು ವ್ಯರ್ಥಗೊಳಿಸಬಾರದು ಎಂದು ಹೇಳಿದರು.

ಪೋಷಣ್ ಅಭಿಯಾನದ ಮೇಲ್ವಿಚಾರಕಿ ಶ್ರೀಮತಿ ಎಸ್.ಮಂಜುಳಾ ಆರೋಗ್ಯವಂತ ಸಮಾಜ ನಿರ್ಮಾಣ ಕ್ಕಾಗಿ ಪೌಷ್ಠಿಕಾಶಂಶಯುಕ್ತ ಆಹಾರ ಬಳಕೆಯ ಮಹತ್ವದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

Poshan Abhiyan ಸಂದರ್ಭದಲ್ಲಿ ನಗರಸಭಾ ಸದಸ್ಯ ಖಲಂದರ್, ಪೋಷಣ್ ಅಭಿಯಾನದ ಮೇಲ್ವಿಚಾರಕಿ ಶ್ರೀಮತಿ ಎಸ್.ಮಂಜುಳಾ, ಸಂಯೋಜಕಿ ಶ್ರೀಮತಿ ದಿವ್ಯ, ಹಿರಿಯ ಮೇಲ್ವಿಚಾಕಿ ಪುಷ್ಪಾವತಿ ಬಿರಾದರ್, ಮುಖ್ಯೋ ಪಾಧ್ಯಾಯ ಸೋಮಶೇಖರ್, ಅಂಗನವಾಡಿ ಶಿಕ್ಷಕಿರಾದ ಸುಮಿತ, ಕೋಮಲ, ವಸೀಮ ಬಾನು, ಶಬೀನಾ ಬಾನು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...