Thursday, June 18, 2026
Thursday, June 18, 2026

Ganesh Chaturthi ಚಿಕ್ಕಮಗಳೂರಿನಲ್ಲಿ ವಿಜೃಂಭಣೆಯಿಂದ ಗಣೇಶ ಪ್ರತಿಷ್ಠಾಪನೆ

Date:

Ganesh Chaturthi ಚಿಕ್ಕಮಗಳೂರು, ನಗರದ ಗೌರಿಕಾಲುವೆ ಶನೇಶ್ವರ ಸ್ವಾಮಿ ದೇವಾಲಯ ಸಮೀಪ ಛಾಯಾ ಪುತ್ರ ಯುವಕರ ಸಂಘದ ವತಿಯಿಂದ ಶ್ರೀ ವಿದ್ಯಾಗಣಪತಿ ಮೂರ್ತಿಯನ್ನು ವಾರ್ಡಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಅತ್ಯಂತ ವಿಜೃಂಭಣೆಯಿಂದ ಕರೆತಂದು ಪ್ರತಿಷ್ಟಾಪಿಸಲಾಯಿತು.

ಸೆ.19 ರಂದು ಸಂಜೆ 6ಗಂಟೆಗೆ ಸ್ಥಳೀಯ ಕಲಾವಿದರಿಂದ ವಿವಿಧ ಕಾರ್ಯಕ್ರಮ. ಸೆ.20 ರಂದು ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ರಂಗೋಲಿ ಸ್ಪರ್ಧೆ, ಮಕ್ಕಳ ಆಟೋಟ ಸ್ಪರ್ಧೆ ಹಾಗೂ ಅದೃಷ್ಟ ಬಹುಮಾನ ಯೋಜ ನೆಯ ಡ್ರಾ ಫಲಿತಾಂಶ ಪ್ರಕಟವಾಗಲಿದೆ.

ಸೆ.21 ರಂದು ಸಂಜೆ 6 ಗಂಟೆಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯ ಕ್ರಮವಿದೆ. ಸೆ.22 ರಂದು ವಿವಿಧ ಹೋಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗಿವಿದೆ.

ಸಂಜೆ. 6 ಗಂಟೆಗೆ ಡೈಮಂಡ್ ವಾಯ್ಸ್ ಭದ್ರಾವತಿ ತಂಡದಿoದ ಆರ್ಕೆಸ್ಟ್ರಾ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.

Ganesh Chaturthi ಕೊನೆಯ ದಿನವಾದ ಸೆ.24 ರಂದು ಬೆಳಿಗ್ಗೆ 8ಕ್ಕೆ ಪೂಜಾ ಕಾರ್ಯಕ್ರಮ. ಮಧ್ಯಾಹ್ನ 3ಗಂಟೆಗೆ ಶ್ರೀಯವ ರನ್ನು ಭವ್ಯವಾದ ಅಲಂಕೃತ ಮಂಪಟದಲ್ಲಿ ಕುಳ್ಳಿರಿಸಿ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆಯೊಂದಿಗೆ ಶ್ರೀಯವರನ್ನು ವಿಸರ್ಜಿಸಲಾಗುವುದು ಎಂದು ಯುವಕರ ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...