Friday, April 3, 2026
Friday, April 3, 2026

Sri Uttaradi Math ಗಣಪತಿಯನ್ನ ನಾವು ನಿತ್ಯ ಸ್ಮರಣೆ ಮಾಡಬೇಕು- ಶ್ರೀಸತ್ಯಾತ್ಮ ತೀರ್ಥರು

Date:

Sri Uttaradi Math ಎಲ್ಲ ಶುಭ ಕಾರ್ಯಗಳಲ್ಲಿ ಬರುವ ವಿಘ್ನಗಳ ಪರಿಹಾರಕ್ಕಾಗಿ ಗಣಪತಿಯನ್ನು ನಾವು ನಿತ್ಯದಲ್ಲಿ ಸ್ಮರಣೆ ಮಾಡಬೇಕು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ಹೊಳೆಹೊನ್ನೂರಿನಲ್ಲಿ,
ಸೋಮವಾರ ಸಂಜೆ ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮ ತೀರ್ಥರ ವ್ಯಾಖ್ಯಾನಾಧಾರಿತ ಮಹಾಭಾರತ ವಿರಾಟ ಪರ್ವ ಮತ್ತು ಗಣಪತಿ ಹಬ್ಬದ ನಿಮಿತ್ತ ಶಮಂತಕೋಪಾಖ್ಯಾನದ ಅನುಗ್ರಹ ಸಂದೇಶದ ನೀಡಿದರು.

ಭಗವಂತ ಆದೇಶ ಮಾಡಿದ ಸತ್ಕಾರ್ಯಗಳನ್ನು ಮಾಡುವಾಗ ಸಜ್ಜನರಿಗೆ ಬರುವಾಗ ವಿಘ್ನಗಳನ್ನು ತಡೆಯಲು ಗಣಪತಿಗೆ ವಿಶಿಷ ಸ್ಥಾನವನ್ನು ದೇವರು ಕೊಟ್ಟಿದ್ದಾನೆ.

ವಿಶ್ವನಾಮಕನಾದ ಪರಮಾತ್ಮನ 19 ಮುಖದೊಳಗಿನ ಮಧ್ಯದ ಮುಖ ಗಜಮುಖ. ಅಂತಹ ಗಜಮುಖವನ್ನು ಗಣಪತಿ ಪಡೆದಿದ್ದಾನೆ ಎಂದರು.

Sri Uttaradi Math ದೇವರ ಗುಣಗಳ ಚಿಂತನ, ದೇವರ ಸರ್ವೋತ್ತಮತ್ವ, ದೇವರ ಆಜ್ಞೆ ಪಾಲಿಸಬೇಕಾದ ಪ್ರವೃತ್ತಿ ಇದೇ ಮೊದಲಾದ ಸುಜ್ಞಾನಕ್ಕೆ ಬರುವ ವಿಘ್ನವನ್ನು ತಡೆಯಬೇಕೆಂದು ಗಣಪತಿಯಲ್ಲಿ ನಾವು ಪ್ರಾರ್ಥಿಸಬೇಕು. ವೇದವ್ಯಾಸ ದೇವರ ಆಜ್ಞೆಯಂತೆ ಮಹಾಭಾರತವನ್ನು ಬರೆದ ಗಣಪತಿ ನಮ್ಮ ಮಸ್ತಕದಲ್ಲಿಯೂ ಮಹಾಭಾರತದ ಜ್ಞಾನವನ್ನು ನೀಡುವಂತೆ ಪ್ರಾರ್ಥಿಸಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ...