Friday, April 3, 2026
Friday, April 3, 2026

Radio Shivamogga ರೇಡಿಯೊ ಶಿವಮೊಗ್ಗ ದಲ್ಲಿ ಆರೋಗ್ಯ ಕುರಿತ ಬಾ‌ನುಲಿ ಸರಣಿ

Date:

Radio Shivamogga ರೇಡಿಯೋ ಶಿವಮೊಗ್ಗ ಹಾಗೂ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ವಿಶೇಷ ಬಾನುಲಿ ಸರಣಿ ಮಾತುಕತೆ ರೂಪುಗೊಂಡಿದೆ. ಈ ಸರಣಿ ಸೆ.25ರಿಂದ ಸೆ.29ರವರೆಗೆ ರೇಡಿಯೋ ಶಿವಮೊಗ್ಗದಲ್ಲಿ ಪ್ರತಿದಿನ ಬೆಳಗ್ಗೆ 9 ರಿಂದ 9:30ರವರೆಗೆ ಪ್ರಸಾರವಾಗಲಿದೆ.

ಸೆ. 29ರ ವಿಶ್ವ ಹೃದಯ ದಿನದ ಅಂಗವಾಗಿ ಈ ಸರಣಿ ನಡೆಯುತ್ತಿದೆ. ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಶ್ರೀವತ್ಸ, ಡಾ. ಅಶ್ವಲ್, ಡಾ. ಶರತ್, ಡಾ. ಬಾಲಸುಬ್ರಮಣಿ, ಡಾ. ವಿಕ್ರಮ್ ಮಹತ್ವದ ಸಲಹೆ, ಸೂಚನೆಗಳನ್ನು ನೀಡಲಿದ್ದಾರೆ. ಆರ್ ಜೆ ಅಶ್ವಿನಿ ಹಾಗೂ ಆರ್ ಜೆ ಅರ್ಪಿತಾ ಇದನ್ನು ನಡೆಸಿಕೊಡಲಿದ್ದಾರೆ. ನಿಮ್ಮ ಹೃದಯದ ಆರೋಗ್ಯ, ಲಾಲನೆ, ಪಾಲನೆಯ ಬಗ್ಗೆ ಇದರಲ್ಲಿ ಮಾಹಿತಿ ದೊರೆಯಲಿದೆ. ಹೃದಯದ ಅನಾರೋಗ್ಯ ಸಮಯದಲ್ಲಿ ಬೇಕಾಗುವ ಕಾಳಜಿಯ ಕುರಿತಾಗಿ ಕಾರ್ಯಕ್ರಮ ಇರುತ್ತದೆ.

ರೇಡಿಯೋ ಶಿವಮೊಗ್ಗವು ಸಾಮಾನ್ಯ ರೇಡಿಯೋಗಳ ಜೊತೆಗೆ, ಮೊಬೈಲ್ ನಲ್ಲಿರುವ ಇನ್ ಬಿಲ್ಟ್ ಎಫ್ ಎಂ ಗಳಲ್ಲಿ ಪ್ರಸಾರವಾಗಲಿದೆ. ಇದರ ಜೊತೆಗೆ ಸ್ವಂತದ್ದೇ ಆಪ್ ಸಹಾ ಹೊಂದಿದ್ದು, ಅದನ್ನು ಗೂಗಲ್ ಪ್ಲೇಸ್ಟೋರ್ ನಲ್ಲಿ ಡೌನ್ಲೋಡ್ ಮಾಡಬಹುದಾಗಿದೆ.

Radio Shivamogga ಹೆಚ್ಚಿನ ಮಾಹಿತಿಗೆ ( ಮೊ: 72591 76279) ಸಂಪರ್ಕಿಸಬಹುದು. ಆಸಕ್ತರು ಕಾರ್ಯಕ್ರಮವನ್ನು ಆಲಿಸಿ, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಎಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...