Sunday, December 14, 2025
Sunday, December 14, 2025

Ganeshotsav at Megan Nurse’s Quarters ಗಣೇಶೋತ್ಸವದಲ್ಲಿ ಆರೋಗ್ಯೋತ್ಸವ

Date:

Ganeshotsav at Megan Nurse’s Quarters ಮೆಗ್ಗಾನ್ ನರ್ಸ್ ಕ್ವಾಟ್ರರ್ಸ್ ನಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ.

ಕಳೆದ 10 ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಪ್ರತಿ ವರ್ಷ ಕೇವಲ ಅನ್ನ ಸಂತರ್ಪಣೆ ಮಾಡಲಾಗುತ್ತಿತ್ತು. ಮೂರು ವರ್ಷಗಳಿಂದ ಕ್ವಾಟ್ರರ್ಸ್ನ ಮಹಿಳೆಯರು, ಮಕ್ಕಳಿಗೆ ವಿಶೇಷ ಕ್ರೀಡಾಕೂಟ, ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಗುತ್ತಿದೆ.
ಆದರೆ, ಈ ಬಾರಿ ಕ್ವಾಟ್ರಸ್‌ನ ಬ್ರರ‍್ಸ್ಗಳು ಮತ್ತು ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳು ರಕ್ತದಾನ ಮಾಡುವ ಮೂಲಕ ವೈಶಿಷ್ಟ್ಯ ವನ್ನು ಮೆರೆದಿದ್ದು, ಗಣೇಶೋತ್ಸವದಲ್ಲಿ ನಿಜವಾದ ಆರೋಗ್ಯೋತ್ಸವ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮೆಗ್ಗಾನ್‌ನ ವೈದ್ಯಕೀಯ ಅಧೀಕ್ಷ ಡಾ. ಟಿ.ಡಿ. ತಿಪ್ಪಮ್ಮ, ಗಣೇಶೋತ್ಸವ ಎಂದರೆ ಕೇವಲ ಹಾಡು, ಕುಣಿತ ಎಂಬ ಭಾವನೆ ಇದೆ. ಆದರೆ, ಇಂದು ನಮ್ಮ ಸಿಬ್ಬಂದಿಗಳು ರಕ್ತದಾನ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದರು

ಸಿಮ್ಸ್ನ ನಿರ್ದೇಶಕ ವಿರೂಪಾಕ್ಷಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ರಕ್ತದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಶುಶ್ರೂಷಕ ಅಧೀಕ್ಷಕಿ ಅನ್ನಪೂರ್ಣ ಹೆಚ್.ಟಿ. ಉಪಸ್ಥಿತರಿದ್ದರು.

Ganeshotsav at Megan Nurse’s Quarters ಬ್ರದರ್‌ಗಳಾದ ಎಂ.ಆರ್. ಸಂತೋಷ್, ದಕ್ಷಣಿಮೂರ್ತಿ, ಅಶೋಕ್, ಸಂತೋಷ, ಕುಮಾರ, ಹನುಮಂತಪ್ಪ, ಗೀತೇಶ್, ಶ್ರೀನಿವಾಸನಾಯ್ಡು, ಜಯಂತ್, ರಘು, ಸೇರಿದಂತೆ ಹಲವರು ರಕ್ತದಾನ ಮಾಡಿದರು.
ಸೆ.24ರ ಭಾನುವಾರ ಗಣಹೋಮ, ಅನ್ನಸಂತರ್ಪಣೆಯ ನಂತರ ಸಂಜೆ 5.30ಕ್ಕೆ ರಾಜಬೀದಿ ಉತ್ಸವ ನಡೆಸಿ ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ವಿಸರ್ಜನೆ ಮಾಡಲಾಗುತ್ತದೆ. ಸಮಸ್ತ ಭಕ್ತಾದಿಗಳು ಪಾಲ್ಗೊಳ್ಳುವಂತೆ ಗಣೇಶೋತ್ಸವ ಸಮಿತಿ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...