Monday, February 2, 2026
Monday, February 2, 2026

Kuvempu University ಕುವೆಂಪು ವಿವಿ ಯಿಂದ ಡಾ.ಅಂಬೇಡ್ಕರ್ ಬಗ್ಗೆ ಸೆ.26 ರಿಂದ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸರಣಿ ಪ್ರಾರಂಭ

Date:

Kuvempu University ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಭದ್ರಾವತಿ ಆಕಾಶವಾಣಿ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7 ಗಂಟೆ 15 ನಿಮಿಷದಿಂದ 7 ಗಂಟೆ 30 ನಿಮಿಷದವರೆಗೆ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತ ವಿಶೇಷ 15 ಕಂತುಗಳ ಉಪನ್ಯಾಸ ಮಾಲಿಕೆ ಪ್ರಸಾರವಾಗಲಿದೆ.

ಡಾ. ಎಸ್. ನರೇಂದ್ರ ಕುಮಾರ್, ಎಂ.ಎನ್. ಸುಂದರ್‌ರಾಜ್, ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಡಾ. ಜಗನ್ನಾಥ ಕೆ. ಡಾಂಗೆ, ಡಾ. ಶುಭಾ ಮರವಂತೆ, ಡಾ. ಹಾ. ಮ. ನಾಗಾರ್ಜುನ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ಕಾರ್ಯಕ್ರಮದ ಕೊನೆಯಲ್ಲಿ ಪ್ರಶ್ನೆಯನ್ನು ಕೇಳಲಾಗುವುದು. ಇದಕ್ಕೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡಿ ಪುರಸ್ಕರಿಸಲಾಗುವುದು. ಉತ್ತರವನ್ನು ಭದ್ರಾವತಿ ಆಕಾಶವಾಣಿ ಕೇಂದ್ರದ ವಾಟ್ಸ್ ಪ್ ಸಂಖ್ಯೆ: 9481572600 ಗೆ ಅದೇ ದಿನ ಕಳುಹಿಸಬೇಕು.

Kuvempu University ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ ಎಫ್ಎಂ 103.5 ಹಾಗೂ ತರಂಗಾತಂರ MW675 khzನಲ್ಲಿ ಹಾಗೂ ವಿಶ್ವದಾದ್ಯಂತ ‘News on Air’ ಆ‌ಪ್ ನಲ್ಲಿ ಕೇಳಬಹುದು ಎಂದು ಕುವೆಂಪು ವಿವಿಯ ಡಾ. ಬಿ.ಆರ್.ಅಂಬೇಢ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...