Saturday, December 6, 2025
Saturday, December 6, 2025

Kuvempu University ಕುವೆಂಪು ವಿವಿ ಯಿಂದ ಡಾ.ಅಂಬೇಡ್ಕರ್ ಬಗ್ಗೆ ಸೆ.26 ರಿಂದ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸರಣಿ ಪ್ರಾರಂಭ

Date:

Kuvempu University ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಭದ್ರಾವತಿ ಆಕಾಶವಾಣಿ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7 ಗಂಟೆ 15 ನಿಮಿಷದಿಂದ 7 ಗಂಟೆ 30 ನಿಮಿಷದವರೆಗೆ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತ ವಿಶೇಷ 15 ಕಂತುಗಳ ಉಪನ್ಯಾಸ ಮಾಲಿಕೆ ಪ್ರಸಾರವಾಗಲಿದೆ.

ಡಾ. ಎಸ್. ನರೇಂದ್ರ ಕುಮಾರ್, ಎಂ.ಎನ್. ಸುಂದರ್‌ರಾಜ್, ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಡಾ. ಜಗನ್ನಾಥ ಕೆ. ಡಾಂಗೆ, ಡಾ. ಶುಭಾ ಮರವಂತೆ, ಡಾ. ಹಾ. ಮ. ನಾಗಾರ್ಜುನ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ಕಾರ್ಯಕ್ರಮದ ಕೊನೆಯಲ್ಲಿ ಪ್ರಶ್ನೆಯನ್ನು ಕೇಳಲಾಗುವುದು. ಇದಕ್ಕೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡಿ ಪುರಸ್ಕರಿಸಲಾಗುವುದು. ಉತ್ತರವನ್ನು ಭದ್ರಾವತಿ ಆಕಾಶವಾಣಿ ಕೇಂದ್ರದ ವಾಟ್ಸ್ ಪ್ ಸಂಖ್ಯೆ: 9481572600 ಗೆ ಅದೇ ದಿನ ಕಳುಹಿಸಬೇಕು.

Kuvempu University ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ ಎಫ್ಎಂ 103.5 ಹಾಗೂ ತರಂಗಾತಂರ MW675 khzನಲ್ಲಿ ಹಾಗೂ ವಿಶ್ವದಾದ್ಯಂತ ‘News on Air’ ಆ‌ಪ್ ನಲ್ಲಿ ಕೇಳಬಹುದು ಎಂದು ಕುವೆಂಪು ವಿವಿಯ ಡಾ. ಬಿ.ಆರ್.ಅಂಬೇಢ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...