Tuesday, April 22, 2025
Tuesday, April 22, 2025

Kuvempu University ಕುವೆಂಪು ವಿವಿ ಯಿಂದ ಡಾ.ಅಂಬೇಡ್ಕರ್ ಬಗ್ಗೆ ಸೆ.26 ರಿಂದ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸರಣಿ ಪ್ರಾರಂಭ

Date:

Kuvempu University ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಭದ್ರಾವತಿ ಆಕಾಶವಾಣಿ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7 ಗಂಟೆ 15 ನಿಮಿಷದಿಂದ 7 ಗಂಟೆ 30 ನಿಮಿಷದವರೆಗೆ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತ ವಿಶೇಷ 15 ಕಂತುಗಳ ಉಪನ್ಯಾಸ ಮಾಲಿಕೆ ಪ್ರಸಾರವಾಗಲಿದೆ.

ಡಾ. ಎಸ್. ನರೇಂದ್ರ ಕುಮಾರ್, ಎಂ.ಎನ್. ಸುಂದರ್‌ರಾಜ್, ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಡಾ. ಜಗನ್ನಾಥ ಕೆ. ಡಾಂಗೆ, ಡಾ. ಶುಭಾ ಮರವಂತೆ, ಡಾ. ಹಾ. ಮ. ನಾಗಾರ್ಜುನ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ಕಾರ್ಯಕ್ರಮದ ಕೊನೆಯಲ್ಲಿ ಪ್ರಶ್ನೆಯನ್ನು ಕೇಳಲಾಗುವುದು. ಇದಕ್ಕೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡಿ ಪುರಸ್ಕರಿಸಲಾಗುವುದು. ಉತ್ತರವನ್ನು ಭದ್ರಾವತಿ ಆಕಾಶವಾಣಿ ಕೇಂದ್ರದ ವಾಟ್ಸ್ ಪ್ ಸಂಖ್ಯೆ: 9481572600 ಗೆ ಅದೇ ದಿನ ಕಳುಹಿಸಬೇಕು.

Kuvempu University ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ ಎಫ್ಎಂ 103.5 ಹಾಗೂ ತರಂಗಾತಂರ MW675 khzನಲ್ಲಿ ಹಾಗೂ ವಿಶ್ವದಾದ್ಯಂತ ‘News on Air’ ಆ‌ಪ್ ನಲ್ಲಿ ಕೇಳಬಹುದು ಎಂದು ಕುವೆಂಪು ವಿವಿಯ ಡಾ. ಬಿ.ಆರ್.ಅಂಬೇಢ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...