Saturday, September 28, 2024
Saturday, September 28, 2024

Kaveri River water dispute ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಚಿಕ್ಕಮಗಳೂರು ಕರವೇ ವತಿಯಿಂದ ಪ್ರತಿಭಟನೆ

Date:

Kaveri River water dispute ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಮಗಳೂರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ನಾಗವಾರ ರಮೇಶ್ ಮಳೆ ಕೊರತೆಯಿಂದ ರಾಜ್ಯದಲ್ಲಿ ಜನತೆಗೆ ತೀವ್ರ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವಾಗಲೇ ರಾಜ್ಯಸರ್ಕಾರ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಸೂಕ್ತವಲ್ಲ. ಕೂಡಲೇ ನೀರು ತಡೆಹಿಡಿಯಬೇಕು ಎಂದರು
ರಾಜ್ಯದಲ್ಲಿ 192 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾವೇರಿ ಕಣಿವೆ ಭಾಗ ದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ ದಿನ 5 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿ ಎಂದು ಹೇಳಿದರು.

ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಪ್ರಾಧಿಕಾರದ ಆದೇಶ ಮುಖ್ಯವಲ್ಲ. ಈಗಲೂ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊ ಳ್ಳಬೇಕು. ರಾಜ್ಯದ ಎಲ್ಲ ಸಂಸದರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.

ರಾಜ್ಯದಲ್ಲಿ ನೀರಿನ ಕೊರತೆಯಿಂದ ರೈತರು ಸಂಕಷ್ಟದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತಿದೆ. ಈ ನಡುವೆ ರಾಜ್ಯ ಸರ್ಕಾರದ ನಿಲುವು ಸರಿಯಲ್ಲ. ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

Kaveri River water dispute ಸಂದರ್ಭದಲ್ಲಿ ಕರವೇ ಜಿಲ್ಲಾಉಪಾಧ್ಯಕ್ಷ ಹರಿಕೃಷ್ಣ, ಕಡೂರು ತಾಲ್ಲೂಕು ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ಬಾಲು, ಯುವಘಟಕದ ಅಧ್ಯಕ್ಷ ಇಮ್ರಾನ್, ಕಾರ್ಯದರ್ಶಿ ರವಿನಾಯ್ಕ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಸಂಚಾಲಕ ಪರಮೇಶ್, ಪದಾಧಿಕಾರಿಗಳಾದ ಗೋವಿಂದ, ಭರತ್, ಗೋವಿಂದಪ್ಪ, ಗಂಗಾಧರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...