Saturday, December 6, 2025
Saturday, December 6, 2025

B. Y. Raghavendra ಕೇಂದ್ರ ಪುರಸ್ಕೃತ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು- ಬಿ.ವೈ.ರಾಘವೇಂದ್ರ

Date:

B. Y. Raghavendra ಕೇಂದ್ರ ಪುರಸ್ಕoತ ಯೋಜನೆಗಳು/ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಹಾಗೂ ಬ್ಯಾಂಕುಗಳು ಇದಕ್ಕೆ ಸಹಕರಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಬ್ಯಾಂಕರ್ಸ್ ಡಿಸಿಸಿ ಮತ್ತು ಡಿಎಲ್‍ಆರ್‍ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಿಎಂ ಸ್ವನಿಧಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಿಸಿದ ಕಚೇರಿಗಳಿಂದ ಅರ್ಜಿಗಳನ್ನು ಬೇಗ ಕಳುಹಿಸಿದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಸೌಲಭ್ಯ ನೀಡಲು ಅವಕಾಶವಾಗುತ್ತದೆ. ಈ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಅರಿವು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬರುವ ತಿಂಗಳಲ್ಲಿ ಎಲ್ಲ ಯೋಜನೆಗಳನ್ನು ಕೇಂದ್ರೀಕೃತಗೊಳಿಸಿದ ಒಂದು ದೊಡ್ಡದಾದ ಕಾರ್ಯಕ್ರಮ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ಆ ಕಾರ್ಯಕ್ರಮದಲ್ಲಿ ಪ್ರಸ್ತುತ ಅರ್ಹರಾದ ಎಲ್ಲ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗವುದು ಎಂದರು.

ಡಿಸೆಂಬರ್ 6 ರಂದು ನಗರದ ಫ್ರೀಡಂ ಪಾರ್ಕಿನಲ್ಲಿ 3 ದಿನಗಳ ಸ್ವದೇಶಿ ಮೇಳವನ್ನು ಏರ್ಪಡಿಸಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲ ಬ್ಯಾಂಕುಗಳು ಸಹಕರಿಸಬೇಕೆಂದರು.

ಮೊದಲನೇ ತ್ರೈಮಾಸಕದಲ್ಲಿ ಆದ್ಯತಾರಹಿತ ವಲಯದಲ್ಲಿ ರೂ.3 ಕೋಟಿ ಶಿಕ್ಷಣ ಸಾಲ ಮತ್ತು ರೂ.90 ಕೋಟಿ ಹೌಸಿಂಗ್ ಸಾಲ ನೀಡಲಾಗಿದ್ದು ಕ್ರಮವಾಗಿ ಶೇ. 13.04 ಮತ್ತು 16.85 ಪ್ರಗತಿ ಸಾಧಿಸಲಾಗಿದೆ. ಬ್ಯಾಂಕ್‍ಗಳು ಶಿಕ್ಷಣ ಸಾಲ ಮತ್ತು ವಸತಿ ಸಾಲಗಳಿಗೆ ಹೆಚ್ಚಿನ ಗಮನ ಹರಿಸಬೇಕೆಂದರು.

ಪ್ರಧಾನಮಂತ್ರಿಯವರು ಸೆ.17 ರಂದು ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದು ಜಿಲ್ಲೆಯಲ್ಲಿಯೂ ಶೀಘ್ರದಲ್ಲೇ ಅದರ ನೋಂದಣಿ ಆರಂಭವಾಗುವುದು. ಸುಮಾರು 18 ಗುಂಪಿನ ಕುಶಲಕರ್ಮಿಗಳಿಗೆ ಈ ಯೋಜನೆಯಡಿ 1 ಲಕ್ಷದವರೆಗೆ ಸಾಲ ಸೌಲಭ್ಯ ದೊರಕಲಿದೆ. 18 ತಿಂಗಳ ಒಳಗೆ ತೀರಿಸಿದರೆ ಮತ್ತೆ ರೂ.2 ಲಕ್ಷ ಸಾಲ ಸಿಗಲಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ಕಾರ್ಡ್‍ನ್ನು ನೀಡಲಾಗುವುದು.

ಕುಶಲಕರ್ಮಿಗಳಿಗೆ ತರಬೇತಿ, ಭತ್ಯೆ ನೀಡಲಾಗುವುದು ಹಾಗೂ ಅರ್ಹರಿಗೆ ಟೂಲ್ ಕಿಟ್‍ಗಳನ್ನು ನೀಡಲಾಗುವುದು. ಸಿಎಸ್‍ಸಿ ಗಳಲ್ಲಿ ಫಲಾನುಭವಿಗಳು ನೋಂದಣಿ ಆಗಬೇಕು.

ಜಿಲ್ಲೆಯಲ್ಲಿ ಶೀಘ್ರದಲ್ಲೇ ವಿಶ್ವಕರ್ಮ ಯೋಜನೆಯಡಿ ನೋಂದಣಿ ಅಭಿಯಾನವನ್ನೆ ಹಮ್ಮಿಕೊಳ್ಳಲಾಗುವುದು. ಹಾಗೂ ಕೇಂದ್ರಗಳಿಗೆ ತಾವೂ ಭೇಟಿ ನೀಡುವುದಾಗಿ ತಿಳಿಸಿದ ಅವರು ಪಿಂಚಣಿ ಯೋಜನೆ, ವಿಮೆ, ಕೃಷಿ,ವಸತಿ ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಅರಿವು ಮತ್ತು ಪ್ರಗತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕೆನರಾ ಬ್ಯಾಂಕ್ ಎಜಿಎಂ ವೆಂಕಟರಾಮುಲು ಬಿ ಮಾತನಾಡಿ, ಸರ್ಕಾರದ ಎಲ್ಲ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಟಾನಗೊಳಿಸುವಲ್ಲಿ ನಂ.1 ಜಿಲ್ಲೆಯಾಗಿ ಶಿವಮೊಗ್ಗ ಹೊರಹೊಮ್ಮಬೇಕು. ಮೊದಲನೇ ತ್ರೈಮಾಸಿಕ ಅಂತ್ಯದವರೆಗೆ ಜಿಲ್ಲೆಯ ಬ್ಯಾಂಕುಗಳಲ್ಲಿ ರೂ.2138.9 ಕೋಟಿ ಠೇವಣಿ ಇದ್ದು, ರೂ.16223 ಮುಂಗಡ ನೀಡಲಾಗಿದೆ. ಹಾಗೂ ತಲಾ ಶೇ.1.76 ಕೃಷಿ ಸಾಲ ಮತ್ತು ಎಂಎಸ್‍ಎಂಇ ಯಲ್ಲಿ ಪ್ರಗತಿ ಆಗಿದೆ. ಒಟ್ಟಾರೆ ಆದ್ಯತಾ ವಲಯದಲ್ಲಿ ಶೇ.1.6 ಪ್ರಗತಿಯಾಗಿದೆ.

B. Y. Raghavendra ಪಿಎಂ ಜನಸುರಕ್ಷಾ ಯೋಜನೆಗಳಾದ ಪಿಎಂಜೆಜೆಬಿವೈ ಯಲ್ಲಿ ಶೇ100.04 ಮತ್ತು ಪಿಎಂಸ್‍ಬಿವೈ ಯೋಜನೆಯಡಿ ಶೇ101.37 ಪ್ರಗತಿ ಸಾಧಿಸುವ ಮೂಲಕ ಪಿಎಂಬಿಎಸ್‍ವೈ ಯೋಜನೆಯಡಿ ರಾಜ್ಯದಲ್ಲಿ 1ನೇ ಸ್ಥಾನ ಮತ್ತು ಜಂಟಿ ಯೋಜನೆಯಾದ ಪಿಎಂಎಸ್‍ಬಿವೈ ಮತ್ತು ಪಿಎಂಜೆಜೆಬಿವೈ ನಲ್ಲಿ 2ನೇ ಸ್ಥಾನದಲ್ಲಿದೆ. ಹಾಗೂ ಈ ಯೋಜನೆಗಳಡಿ ಕೆನರಾ ಬ್ಯಾಂಕ್ ಅತ್ಯುತ್ತಮ ಪ್ರಗತಿ ಸಾಧಿಸಿದೆ. ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ನೀಡುವ ಯೋಜನೆಯಾದ ಪಿಎಂ ಸ್ವನಿಧಿ ಯೋಜನೆಯ ಮೊದಲ ಹಂತದಲ್ಲಿ ಶೇ.99.22, ಎರಡನೇ ಹಂತದಲ್ಲಿ ಶೇ.98.17 ಮತ್ತು ಮೂರನೇ ಹಂತ ಸಾಲ ನೀಡುವಿಕೆಯಲ್ಲಿ ಬ್ಯಾಂಕುಗಳು ಶೇ.98.52 ಪ್ರಗತಿ ಸಾಧಿಸಿವೆ ಎಂದರು.

ಸಭೆಯಲ್ಲಿ ಆರ್‍ಬಿಐ ಬೆಂಗಳೂರಿನ ಬಿಸ್ವಾಸ್, ನಬಾರ್ಡ್ ಡಿಡಿಎಂ ಶರತ್ ಗೌಡ ಪಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಅಮರನಾಥ ಹೆಚ್, ವಿವಿಧ ಬ್ಯಾಂಕುಗಳ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...