Sunday, August 2, 2026
Sunday, August 2, 2026

CM Siddaramaiah ಕಾವೇರಿ ಸಮಸ್ಯೆ ಪ್ರಧಾನಿ‌ಮೋದಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ: ಸಿದ್ಧರಾಮಯ್ಯ ಸ್ವಾಗತ

Date:

CM Siddaramaiah ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ
ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

CM Siddaramaiah ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...