Monday, February 2, 2026
Monday, February 2, 2026

Cauvery Water Dispute 3000 ಕ್ಯೂಸೆಕ್ ನೀರು ಹರಿಸುವ ಆದೇಶ ,ಕರ್ನಾಟಕದ ಪಾಲಿಗೆ ಕರಾಳ ಶಾಸನ- ಬಿ.ವೈ.ವಿಜಯೇಂದ್ರ

Date:

Cauvery Water Dispute ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ‘ಗಾಯದ ಮೇಲೆ ಬರೆ’ ಎಳೆದಂತೆ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು ಕರ್ನಾಟಕದ ಪಾಲಿಕೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ತಿಳಿಸಿದ್ದಾರೆ.

Cauvery Water Dispute ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಟ ಕಾಳಜಿಯೂ ತೋರದೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ, ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...