Thursday, March 19, 2026
Thursday, March 19, 2026

Cauvery Water Dispute 3000 ಕ್ಯೂಸೆಕ್ ನೀರು ಹರಿಸುವ ಆದೇಶ ,ಕರ್ನಾಟಕದ ಪಾಲಿಗೆ ಕರಾಳ ಶಾಸನ- ಬಿ.ವೈ.ವಿಜಯೇಂದ್ರ

Date:

Cauvery Water Dispute ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ‘ಗಾಯದ ಮೇಲೆ ಬರೆ’ ಎಳೆದಂತೆ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು ಕರ್ನಾಟಕದ ಪಾಲಿಕೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ತಿಳಿಸಿದ್ದಾರೆ.

Cauvery Water Dispute ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಟ ಕಾಳಜಿಯೂ ತೋರದೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ, ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...