Friday, April 3, 2026
Friday, April 3, 2026

Sara Sunny Advocate ಮೂಕ ಸಂಜ್ಞೆಗಳ ಮೂಲಕ ವಾದಿಸಿದ ವಕೀಲೆ ಸಾರಾ ಸನ್ನಿ

Date:

Sara Sunny Advocate ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ಮೂಕ ವಕೀಲೆ ವಾದ ಮಂಡನೆ ಮಾಡಿದ್ದಾರೆ.

ಹೌದು, ವಕೀಲೆಯ ಹೆಸರು ಸಾರಾ ಸನ್ನಿ. ಸಾರಾ ಅವರಿಗೆ ಸುಪ್ರೀಂ ಕೋರ್ಟ್ ನ ಕಲಾಪದಲ್ಲಿ ಕಾಣಿಸಿಕೊಳ್ಳುವುದು ಕನಸ್ಸಾಗಿತ್ತು. ಸಾರಾ ಅವರು ಮೂಕ ವಕೀಲರಾಗಿಯೇ ನೋಂದಾಯಿಸಲ್ಪಟ್ಟ ಭಾರತದ ಮೊದಲ ವಕೀಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತದ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರಿದ್ದ ಪೀಠವು ವರ್ಚುವಲ್ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾಸನಿ ಎಂಬ ವಾಕ್ ಶ್ರವಣ ದೋಷವುಳ್ಳ ನ್ಯಾಯವಾದಿಯು ತಮ್ಮ ಸಂಜ್ಞೆಯ ತಜ್ಞರಾದ ಸೌರಭ್ ರಾಯ್ ಚೌಧರಿ ಮೂಲಕ ವಾದವನ್ನು ಮಂಡಿಸಿದ್ದಾರೆ.

ಸಾರಾ ಅವರ ಸಂಕೇತ ಭಾಷೆಯನ್ನು ಸೌರಭ್ ಅವರು ಬಾಯಿ ಮಾತಿನಲ್ಲಿ ನ್ಯಾಯ ಪೀಠಕ್ಕೆ ತಿಳಿಸಿದ್ದಾರೆ.

ಈ ಪ್ರಯತ್ನವನ್ನ ಅನೇಕರು ಶ್ಲಾಘಿಸಿದ್ದಾರೆ. ಈ ವಿಚಾರಣೆಯ ಸಂದರ್ಭದಲ್ಲಿ ವರ್ಜಿನಲ್ ವಿಚಾರಣೆಯ ತಾಂತ್ರಿಕ ತಂಡವು, ಸಾರಾ ಅವರಿಗೆ ಸ್ಕ್ರೀನ್ ಮೇಲೆ ಬರಲು ಅನುಮತಿ ನೀಡಲಿಲ್ಲ. ಕೇವಲ ಸಂಜ್ಞೆ ತಜ್ಞರಾದ ಸೌರಭ್ ಅವರಿಗೆ ಮಾತ್ರ ಅನುಮತಿ ನೀಡಿತ್ತು. ಆದ್ದರಿಂದ ಮೊದಲಿಗೆ ಸ್ಕ್ರೀನ್ ನಲ್ಲಿ ಸೌರಭ್ ಮಾತ್ರ ಕಾಣಿಸಿಕೊಂಡಿದ್ದರು.

ಆಗ, ನ್ಯಾ. ಡಿ ವೈ ಚಂದ್ರಚೂಡ ಅವರು ಮಧ್ಯಪ್ರವೇಶಿಸಿ ಸಾರಾ ಅವರಿಗೂ ಸ್ಕ್ರೀನ್ ಮೇಲೆ ಬರಲು ಅವಕಾಶ ನೀಡಲು ಆದೇಶಿಸಿದರು.

Sara Sunny Advocate ಆನಂತರದಲ್ಲಿ ಸಾರಾ ಅವರು ಬಂದು ಸ್ಕ್ರೀನ್ ನಲ್ಲಿ ವಾದವನ್ನು ಸಂಜ್ಞೆಯ ಮೂಲಕ ತಿಳಿಸುತ್ತಿದ್ದರು.ಇನ್ನೊಂದು ಕಡೆ ಅವರ ಸನ್ನಿಗಳನ್ನ ಅವರ ಸನ್ನೆ ತಜ್ಞರಾದ ಸೌರಭ್ ಅವರು ಬಾಯಿ ಮಾತಿನಲ್ಲಿ ವಿವರಣೆ ನೀಡಿದರು. ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಇದೆ ಪ್ರಥಮ ಬಾರಿಗೆ ಇಂತಹ ವಾದವನ್ನು ಮಂಡಿಸಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸಾರಾ ಅವರ ಈ ಛಲಕ್ಕೇ ನಮ್ಮ ಕೆ ಲೈವ್ ನ್ಯೂಸ್ ಚಾನಲ್ ಅಭಿನಂದಿಸು ತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ...