Monday, December 15, 2025
Monday, December 15, 2025

Uttaradi Math ಬೌದ್ಧಿಕ ಆರೋಗ್ಯ ಕೆಟ್ಟರೆ ಅಪಾಯ- ಶ್ರೀಸತ್ಯಾತ್ಮತೀರ್ಥರು

Date:

Uttaradi Math ದೈಹಿಕ ಆರೋಗ್ಯ ಕೆಡಿಸಿಕೊಂಡವರಿಗೆ ಸಹಾಯ ಮಾಡಿದಂತೆ ಬೌದ್ಧಿಕ, ಆಧ್ಯಾತ್ಮಿಕ ಆರೋಗ್ಯ ಕೆಡಿಸಿಕೊಂಡವರಿಗೆ ಆದ್ಯತೆಯ ಮೇಲೆ ಸಹಾಯ ಮಾಡಲೇಬೇಕು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ಹೊಳೆಹೊನ್ನೂರಿನಲ್ಲಿ
ಸೋಮವಾರ ಸಂಜೆ ಇಲ್ಲಿನ ಶ್ರೀ ಸತ್ಯಧರ್ಮ ಮಠದಲ್ಲಿ ನಡೆಯುತ್ತಿರುವ 28ನೇ ಚಾತುರ್ಮಾಸ್ಯದಲ್ಲಿ ನಡೆದ ವಿದ್ವತ್ ಸಭೆಯಲ್ಲಿ ದಶಮ ಸ್ಕಂದ ಭಾಗವತ ಕುರಿತು ಅವರು ಪ್ರವಚನ ನೀಡಿದರು.
ದೈಹಿಕ ಆರೋಗ್ಯ ಹದಗೆಟ್ಟರೆ ಅದು ಇಂದಲ್ಲಾ ನಾಳೆ ಸರಿಯಾಗಬಹುದು. ಆದರೆ ಬೌದ್ಧಿಕ ಆರೋಗ್ಯ ಕಟ್ಟರೆ ಭಾರೀ ಅಪಾಯ. ದುರ್ಮಾರ್ಗದಲ್ಲಿ ಹೋಗುತ್ತಾನೆ, ವ್ಯಸನಕ್ಕೆ ಬಲಿಯಾಗುತ್ತಾನೆ. ದುರ್ಮಾರ್ಗದಲ್ಲಿ ಸಾಗುತ್ತಾನೆ. ನಾಸ್ತಿಕನಾಗಿ ಬಿಡುತ್ತಾನೆ. ಇಡೀ ಮಾನವ ಜನ್ಮವನ್ನೇ ಹಾಳು ಮಾಡಿಕೊಳ್ಳುತ್ತಾನೆ. ಹೀಗಾಗಿ ರೋಗ ಆದರೆ ಔಷಧೋಪಚಾರ ಮಾಡಿದಂತೆ ಬೌದ್ಧಿಕ, ಆಧ್ಯಾತ್ಮಿಕ ಆರೋಗ್ಯ ಕೆಡಿಸಿಕೊಂಡವರಿಗೆ ಸನ್ಮಾರ್ಗ ತೋರಿ. ಇದು ಎಲ್ಲರ ಕರ್ತವ್ಯ ಎಂದರು.

ವಿದ್ವಾoಸರು, ಸಜ್ಜನರು, ಸನ್ಯಾಸಿಗಳು ಯಾರೇ ಉಪದೇಶ ಮಾಡಿದರೂ ಕೆಲವರು ಬದಲಾವಣೆ ಆಗುವುದೇ ಇಲ್ಲ. ಉಪದೇಶ ಕೇಳಿದರೂ ಅನುಷ್ಠಾನ ಮಾಡುವುದಿಲ್ಲ. ಅದಕ್ಕೆ ಕಾರಣ ಆ ಜೀವಿಯ ಯೋಗ್ಯತೆ ಮತ್ತು ದೇವರು ಸದ್ಭುದ್ಧಿಯ ಪ್ರೇರಣೆ ಮಾಡುತ್ತಿಲ್ಲ ಎಂದರ್ಥ. ಏನೋ ಪ್ರತಿಬಂಧಕ ಇದೆ ಎಂದರ್ಥ. ಯಾವುದೇ ಸತ್ಕರ್ಮಗಳು ಮಾಡುವಾಗ ವಿಘ್ನಗಳು ಬರುತ್ತವೆ ಎಂದರೆ ನಾವು ಆ ಸತ್ಕರ್ಮವನ್ನು ಬಿಟ್ಟುಬಿಡಬಾರದು. ಮತ್ತೆ ಮತ್ತೆ ಸತ್ಕರ್ಮ ಮಾಡುವ ಪ್ರಯತ್ನ ಮಾಡಬೇಕು ಎಂದರು.
ಪಂಡಿತ ವೆಂಕಟೇಶಾಚಾರ್ಯ ಕೊರ್ಲಹಳ್ಳಿ ಮಾತನಾಡಿ, ಸತ್ಯಧರ್ಮ ತೀರ್ಥರ ವ್ಯಾಖ್ಯಾನವನ್ನು ಅರ್ಥ ಮಾಡಿಕೊಳ್ಳುವ ಯೋಗ್ಯತೆ ನಮ್ಮಂತಹ ಸಾಮಾನ್ಯರಿಗೆ ಇಲ್ಲ. ಅದರ ಪೂರ್ಣಭಾವ ಅರ್ಥವಾಗಬೇಕಾದರೆ ಸ್ವಾಮಿಗಳಂತಹ ಜ್ಞಾನಿಗಳ ಬಾಯಿಂದ ಕೇಳಬೇಕು ಎಂದರು.

Uttaradi Math ಉತ್ತರಾದಿ ಮಠದ ದಿವಾನರಾದ ಶಶಿ ಆಚಾರ್, ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರಾದ ಸುಬ್ಬಣ್ಣಾಚಾರ್ಯ ನವರತ್ನ, ಶ್ರೀನಿವಾಸಾಚಾರ್ಯ ನವರತ್ನ, ಪುರುಷೋತ್ತಮಾಚಾರ್ಯ ನವರತ್ನ, ರಘೂತ್ತಮಾಚಾರ್ಯ ಸಂಡೂರು, ಬಾಳಗಾರು ಜಯತೀರ್ಥಾಚಾರ್ಯ, ಕೃಷ್ಣಾಚಾರ್ಯ ರಾಯಚೂರು, ಪ್ರಕಾಶಾಚಾರ್ಯ, ಅನಿಲ್ ರಾಮಧ್ಯಾನಿ, ಗುರುರಾಜ್ ಕಟ್ಟಿ, ವಾದಿರಾಜ ಸಿ.ಪಿ. ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...