Friday, September 27, 2024
Friday, September 27, 2024

Uttaradi Math ಬೌದ್ಧಿಕ ಆರೋಗ್ಯ ಕೆಟ್ಟರೆ ಅಪಾಯ- ಶ್ರೀಸತ್ಯಾತ್ಮತೀರ್ಥರು

Date:

Uttaradi Math ದೈಹಿಕ ಆರೋಗ್ಯ ಕೆಡಿಸಿಕೊಂಡವರಿಗೆ ಸಹಾಯ ಮಾಡಿದಂತೆ ಬೌದ್ಧಿಕ, ಆಧ್ಯಾತ್ಮಿಕ ಆರೋಗ್ಯ ಕೆಡಿಸಿಕೊಂಡವರಿಗೆ ಆದ್ಯತೆಯ ಮೇಲೆ ಸಹಾಯ ಮಾಡಲೇಬೇಕು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ಹೊಳೆಹೊನ್ನೂರಿನಲ್ಲಿ
ಸೋಮವಾರ ಸಂಜೆ ಇಲ್ಲಿನ ಶ್ರೀ ಸತ್ಯಧರ್ಮ ಮಠದಲ್ಲಿ ನಡೆಯುತ್ತಿರುವ 28ನೇ ಚಾತುರ್ಮಾಸ್ಯದಲ್ಲಿ ನಡೆದ ವಿದ್ವತ್ ಸಭೆಯಲ್ಲಿ ದಶಮ ಸ್ಕಂದ ಭಾಗವತ ಕುರಿತು ಅವರು ಪ್ರವಚನ ನೀಡಿದರು.
ದೈಹಿಕ ಆರೋಗ್ಯ ಹದಗೆಟ್ಟರೆ ಅದು ಇಂದಲ್ಲಾ ನಾಳೆ ಸರಿಯಾಗಬಹುದು. ಆದರೆ ಬೌದ್ಧಿಕ ಆರೋಗ್ಯ ಕಟ್ಟರೆ ಭಾರೀ ಅಪಾಯ. ದುರ್ಮಾರ್ಗದಲ್ಲಿ ಹೋಗುತ್ತಾನೆ, ವ್ಯಸನಕ್ಕೆ ಬಲಿಯಾಗುತ್ತಾನೆ. ದುರ್ಮಾರ್ಗದಲ್ಲಿ ಸಾಗುತ್ತಾನೆ. ನಾಸ್ತಿಕನಾಗಿ ಬಿಡುತ್ತಾನೆ. ಇಡೀ ಮಾನವ ಜನ್ಮವನ್ನೇ ಹಾಳು ಮಾಡಿಕೊಳ್ಳುತ್ತಾನೆ. ಹೀಗಾಗಿ ರೋಗ ಆದರೆ ಔಷಧೋಪಚಾರ ಮಾಡಿದಂತೆ ಬೌದ್ಧಿಕ, ಆಧ್ಯಾತ್ಮಿಕ ಆರೋಗ್ಯ ಕೆಡಿಸಿಕೊಂಡವರಿಗೆ ಸನ್ಮಾರ್ಗ ತೋರಿ. ಇದು ಎಲ್ಲರ ಕರ್ತವ್ಯ ಎಂದರು.

ವಿದ್ವಾoಸರು, ಸಜ್ಜನರು, ಸನ್ಯಾಸಿಗಳು ಯಾರೇ ಉಪದೇಶ ಮಾಡಿದರೂ ಕೆಲವರು ಬದಲಾವಣೆ ಆಗುವುದೇ ಇಲ್ಲ. ಉಪದೇಶ ಕೇಳಿದರೂ ಅನುಷ್ಠಾನ ಮಾಡುವುದಿಲ್ಲ. ಅದಕ್ಕೆ ಕಾರಣ ಆ ಜೀವಿಯ ಯೋಗ್ಯತೆ ಮತ್ತು ದೇವರು ಸದ್ಭುದ್ಧಿಯ ಪ್ರೇರಣೆ ಮಾಡುತ್ತಿಲ್ಲ ಎಂದರ್ಥ. ಏನೋ ಪ್ರತಿಬಂಧಕ ಇದೆ ಎಂದರ್ಥ. ಯಾವುದೇ ಸತ್ಕರ್ಮಗಳು ಮಾಡುವಾಗ ವಿಘ್ನಗಳು ಬರುತ್ತವೆ ಎಂದರೆ ನಾವು ಆ ಸತ್ಕರ್ಮವನ್ನು ಬಿಟ್ಟುಬಿಡಬಾರದು. ಮತ್ತೆ ಮತ್ತೆ ಸತ್ಕರ್ಮ ಮಾಡುವ ಪ್ರಯತ್ನ ಮಾಡಬೇಕು ಎಂದರು.
ಪಂಡಿತ ವೆಂಕಟೇಶಾಚಾರ್ಯ ಕೊರ್ಲಹಳ್ಳಿ ಮಾತನಾಡಿ, ಸತ್ಯಧರ್ಮ ತೀರ್ಥರ ವ್ಯಾಖ್ಯಾನವನ್ನು ಅರ್ಥ ಮಾಡಿಕೊಳ್ಳುವ ಯೋಗ್ಯತೆ ನಮ್ಮಂತಹ ಸಾಮಾನ್ಯರಿಗೆ ಇಲ್ಲ. ಅದರ ಪೂರ್ಣಭಾವ ಅರ್ಥವಾಗಬೇಕಾದರೆ ಸ್ವಾಮಿಗಳಂತಹ ಜ್ಞಾನಿಗಳ ಬಾಯಿಂದ ಕೇಳಬೇಕು ಎಂದರು.

Uttaradi Math ಉತ್ತರಾದಿ ಮಠದ ದಿವಾನರಾದ ಶಶಿ ಆಚಾರ್, ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರಾದ ಸುಬ್ಬಣ್ಣಾಚಾರ್ಯ ನವರತ್ನ, ಶ್ರೀನಿವಾಸಾಚಾರ್ಯ ನವರತ್ನ, ಪುರುಷೋತ್ತಮಾಚಾರ್ಯ ನವರತ್ನ, ರಘೂತ್ತಮಾಚಾರ್ಯ ಸಂಡೂರು, ಬಾಳಗಾರು ಜಯತೀರ್ಥಾಚಾರ್ಯ, ಕೃಷ್ಣಾಚಾರ್ಯ ರಾಯಚೂರು, ಪ್ರಕಾಶಾಚಾರ್ಯ, ಅನಿಲ್ ರಾಮಧ್ಯಾನಿ, ಗುರುರಾಜ್ ಕಟ್ಟಿ, ವಾದಿರಾಜ ಸಿ.ಪಿ. ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...