Tuesday, April 22, 2025
Tuesday, April 22, 2025

Vishwa Hindu Parishad-Bajrang Dal ಹಿಂದೂ ಸಮಾಜದ ಯುವಕರನ್ನು ಜಾಗೃತಗೊಳಿಸಲು ಶೌರ್ಯ ಜಾಗರಣ ರಥ- ಕೆ.ಆರ್.ಸುನೀಲ್

Date:

Vishwa Hindu Parishad-Bajrang Dal ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಿಂದೂಗಳನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕೆಲಸ ಹಿಂದಿನಿoದಲೂ ಮಾಡುತ್ತಿದೆ. ತ್ಯಾಗದ ಪರಂಪರೆ ನಮ್ಮದು ಎನ್ನುವುದನ್ನು ಇಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಕೆ.ಆರ್. ಸುನೀಲ್ ಹೇಳಿದರು.

ಸೊರಬ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದಿoದ ಹಮ್ಮಿಕೊಂಡ ಶೌರ್ಯ ಜಾಗರಣ ರಥಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದೂ ಧರ್ಮದ ಮೇಲೆ ನೂರಾರು ವರ್ಷಗಳ ಕಾಲ ಪರಕೀಯರ ದಾಳಿ ನಡೆದಾಗಲೂ ಧರ್ಮವೂ ಈ ನೆಲದಲ್ಲಿ ನೆಲೆಯೂರಿದೆ. ಹಿಂದೂ ಧರ್ಮದ ರಕ್ಷಣೆಗಾಗಿ ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನವಿದೆ. ಇದನ್ನೂ ಇಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯವಾಗಿದೆ. ಹಿಂದೂ ಧರ್ಮದ ಮೇಲೆ ಅನೇಕ ಆಕ್ರಮಣಗಳಾಗಿವೆ. ಇಸ್ಲಾಂ ಕ್ರೆöÊಸ್ತರ ದಾಳಿಯನ್ನು ಶೌರ್ಯ ಮತ್ತು ತ್ಯಾಗದ ಮೂಲಕ ಹಿರಿಯರು ಎದುರಿಸಿದ್ದಾರೆ.

ಹಿಂದೂ ಸಮಾಜದ ಯುವಕರನ್ನು ಬಡಿದೆಬ್ಬಿಸಲು ಶೌರ್ಯ ಜಾಗರಣ ರಥ ಯಾತ್ರೆ ದೇಶಾದ್ಯಂತ ನಡೆಯುತ್ತಿದೆ ಎಂದರು.

ವಿಹಿಂಪ ಕ್ಷೇತ್ರೀಯ ಸತ್ಸಂಗ ಪ್ರಮುಖ್ ಮಹಾಬಲೇಶ್ವರ ರಾವ್ ಮಾತನಾಡಿ, ಭಾರತದ ಮೇಲೆ ಅಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ. ಅನ್ಯಧರ್ಮಿಯರಿಂದ ಹಿಂದೂ ಸಮಾಜದ ಮೇಲೆ ಅನೇಕ ಅಕ್ರಮಗಳಾಗಿವೆ. ಜಗತ್ತಿನಲ್ಲಿ ಹಿಂದೂಗಳಿಗೆ ಉಳಿದಿರುವುದು ಭಾರತ ಮಾತ್ರ. ದೇಶ ಹಿಂದೂಸ್ತಾನವಾಗಬೇಕು. ವಿಹಿಂಪ ಸ್ಥಾಪನೆಯಾಗಿ ಅರವತ್ತು ವರ್ಷ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದೆ ಎಂದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮುಂಭಾಗ ಶೌರ್ಯ ಜಾಗರಣ ರಥಯಾತ್ರೆಯನ್ನು ಸ್ವಾಗತಿಸಿ, ರಾಜಬೀದಿಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊoದಿಗೆ ಮೆರವಣಿಗೆ ನಡೆಸಲಾಯಿತು.

Vishwa Hindu Parishad-Bajrang Dal ಬಜರಂಗದಳ ವಿಭಾಗ ಸಂಯೋಜಕ ರಾಜೇಶ್‌ಗೌಡ, ಜಿಲ್ಲಾ ಸಹ ಸಂಯೋಜಕ್ ಶಶಿಕುಮಾರ್, ತಾಲೂಕು ಸಹ ಸಂಯೋಜಕ ಮಣಿಕಂಠ, ನಗರ ಸಂಯೋಜಕ ಎಸ್.ಎನ್. ಶರತ್, ವಿಹಿಂಪ ಸಾಗರ ಜಿಲ್ಲಾ ಕಾರ್ಯದರ್ಶಿ ಎಚ್.ಎಲ್. ಚಂದನ್, ಜಿಲ್ಲಾ ಮಂದಿರ ಅರ್ಚಕ ಪರೋಹಿತ ಸಂಪರ್ಕ ಪ್ರಮುಖ್ ಎಂ.ಎಸ್. ಕಾಳಿಂಗ್‌ರಾಜ್, ಮಾತೃ ಮಂಡಳಿಯ ವಾಸಂತಿ ನಾವುಡಾ, ವೀಣಾ ಶ್ರೀಧರ್, ದುರ್ಗಾ ವಾಹಿನಿ ಕೋಮಲಾ ಪುರಾಣಿಕ್, ಪ್ರಮುಖರಾದ ಡಾ.ಎಚ್.ಇ. ಜ್ಞಾನೇಶ್, ಪಾಣಿ ರಾಜಪ್ಪ, ಸಂಜೀವ್ ಆಚಾರ್, ನಾಗರಾಜ ಗುತ್ತಿ, ಸಿ.ಪಿ. ಈರೇಶ್‌ಗೌಡ, ಮಹೇಶ್ ಖಾರ್ವಿ, ಮಹೇಶ್ ಗೋಖಲೆ, ಆಶೀಕ್ ನಾಗಪ್ಪ, ನಿರಂಜನ್, ನೆಮ್ಮದಿ ಶ್ರೀಧರ್, ಅಮೃತ, ಕೆ.ವಿ. ವಿನಾಯಕ, ರಾಘು ಮಡಿವಾಳ, ಉಮಾಶಂಕರ, ಪ್ರವೀಣ, ಆನಂದ, ಅಭಿ ಹೊಯ್ಸಳ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....