Friday, April 25, 2025
Friday, April 25, 2025

Cauvery Water Row ಕಾವೇರಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ

Date:

Cauvery Water Row ಕಾವೇರಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್ ಗೆ ಬೆಂಬಲವಾಗಿ ಸಾಂಕೇತಿಕ ಪ್ರತಿಭಟನೆಯಲ್ಲಿ ಕನ್ನಡ ಚಿತ್ರರಂಗ ಒಗ್ಗಟ್ಟು ಪ್ರದರ್ಶಿಸಿದೆ.

ಚಿತ್ರನಟರಾದ ಶಿವರಾಜ್ ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಧ್ರುವ ಸರ್ಜಾ ಸೇರಿದಂತೆ ಅನೇಕ ಕಲಾವಿದರು, ನಿರ್ದೇಶಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ಹೋರಾಟದ ನೇತೃತ್ವವನ್ನು ನಟ ಶಿವರಾಜ್ ಕುಮಾರ್ ಅವರು ವಹಿಸಿದ್ದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ವಿರೋಧಿಸಿ ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಳಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್ ಅವರು ಮಾತನಾಡಿ, ಕಲಾವಿದರು ಬಂದಿಲ್ಲ. ಈ ಕಲಾವಿದರು ಬಂದಿಲ್ಲ ಎಂದು ದೂರ ಬೇಡಿ. ನಮಗೆ ತಮಿಳುನಾಡು ಬಗ್ಗೆಯೂ ಪ್ರೀತಿ ಇದೆ. ಅವರು ನಮ್ಮ ಪಕ್ಕದ ರಾಜ್ಯದವರೇ. ಕಾವೇರಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಯತ್ನ ಮಾಡಬೇಕು. ಆಗ ಫಲಿತಾಂಶ ಸಿಗುತ್ತದೆ ಎಂದರು.

Cauvery Water Row ನಟಿ ಉಮಾಶ್ರೀ ಅವರು ಮಾತನಾಡಿ, ಕಾವೇರಿ ನೀರು ಹಂಚಿಕೆ ಸಮಸ್ಯೆಯೂ ಬಗೆಹರಿಯದ ಕಗ್ಗಂಟಾಗಿದೆ. ಎರಡು ಸರ್ಕಾರಗಳು ಇದರ ಬಗ್ಗೆ ಸೂಕ್ತವಾಗಿ ಚರ್ಚಿಸಿ ಕಾವೇರಿ ವಿವಾದ ಬಗೆಹರಿಸಲು ಯತ್ನಿಸಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...