Monday, December 15, 2025
Monday, December 15, 2025

CM Siddharamaih ಶಾಲೆಯ ಸನಿಹ ತಂಬಾಕು ಮಾರಾಟ ವಿಷಯ ತಿಳಿಸಿ ಪತ್ರ ಮುಖೇನ ಸಿಎಂ ಗಮನ ಸೆಳೆದ ಬಾಲಕಿ ಅಯಾರ

Date:

CM Siddharamaih ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಕೈಕಂಬದ 3ನೇ ತರಗತಿಯಲ್ಲಿ ಓದುವ ಪುಟ್ಟ ಬಾಲಕಿ ಅಯಾರ ತನ್ನ ಶಾಲೆಯ ಸಮೀಪದ ಅಂಗಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದಾರೆ, ಇದನ್ನು ನಿಲ್ಲಿಸಬೇಕು ಎಂದು ನಮಗೆ ಪತ್ರ ಬರೆದು ಮನವಿ ಮಾಡಿದ್ದಳು.

ಬಾಲಕಿಯ ಸಮಸ್ಯೆ ಚಿಕ್ಕದಾದರೂ ಕಾನೂನಿನ ಬಗ್ಗೆ ಆಕೆಗಿರುವ ಅರಿವು ಮತ್ತು ಅಕ್ರಮದ ವಿರುದ್ಧ ಧ್ವನಿಯೆತ್ತುವ ಧೈರ್ಯ ಕಂಡು ಖುಷಿಯಾಯಿತು. ಬಾಲಕಿಯ ಪತ್ರ ತಲುಪಿದ ಕೆಲವೇ ಕೆಲವು ಗಂಟೆಗಳ ಒಳಗೆ ನಮ್ಮ ಕಚೇರಿಯ ಸಾರ್ವಜನಿಕ ಕುಂದುಕೊರತೆಗಳ ವಿಭಾಗದ ವಿಶೇಷಾಧಿಕಾರಿಗಳು ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ.

CM Siddharamaih ಕೂಡಲೆ ಅಧಿಕಾರಿಗಳ ತಂಡ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದ ಸ್ಥಳಕ್ಕೆ ತೆರಳಿ, ತಪ್ಪಿತಸ್ಥನಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿದೆ.

ಬಾಲಕಿಯ ಕೋರಿಕೆ ಚಿಕ್ಕದಾದರೂ ಸರ್ಕಾರ ತಮ್ಮ ಅಹವಾಲನ್ನೂ ಆಲಿಸಿ, ಸಮಸ್ಯೆ ಬಗೆಹರಿಸುತ್ತದೆ ಎಂಬ ವಿಶ್ವಾಸ ಮಕ್ಕಳಲ್ಲಿ ಬಂದರೆ ತಮ್ಮ ಸುತ್ತಮುತ್ತ ನಡೆಯುವ ಅಕ್ರಮ, ಅನ್ಯಾಯಗಳನ್ನು ಖಂಡಿಸುತ್ತಾರೆ. ಅವರಲ್ಲಿ ಈ ಆತ್ಮಸ್ಥೈರ್ಯ ತುಂಬುವುದು ನಮ್ಮ ಜವಾಬ್ದಾರಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...