Monday, February 2, 2026
Monday, February 2, 2026

Swachh Bharat Abhiyan ಸ್ವಚ್ಛ ಭಾರತ ಅಭಿಯಾನ ಎಲ್ಲರಿಗೂ ಮಾದರಿ-ಪ್ರೊ.ಎಸ್.ವೆಂಕಟೇಶ್

Date:

Swachh Bharat Abhiyan ಗಾಂಧಿ ಜಯಂತಿಯ ಅಂಗವಾಗಿ ಭಾರತ ಸರ್ಕಾರದ ‘ಏಕ್ ತಾರೀಖ್ ಏಕ್ ಘಂಟಾ’ ಸ್ವಚ್ಛತಾ ಅಭಿಯಾನ ಇಂದು ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆಯಿತು.

ಗಾಂಧಿ ಜಯಂತಿಯ ಮುನ್ನಾ ದಿನವಾದ ಇಂದು ಬೆಳಿಗ್ಗೆ 10 ಗಂಟೆಯಿಂದ 11ರವರೆಗೆ ‘ಸ್ವಚ್ಛತೆಯೇ ಸೇವೇ’ ಶೀರ್ಷಿಕೆಯಡಿ
ಸುಮಾರು 1500 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ‌ಆವರಣದಾದ್ಯಂತ ಪ್ಲಾಸ್ಟಿಕ್, ಕಸ, ಮತ್ತು ಇತರೆ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು.

Swachh Bharat Abhiyan ಕುಲಪತಿ ಪ್ರೊ. ಎಸ್. ವೆಂಕಟೇಶ್ ಮಾತನಾಡಿ, ಗಾಂಧೀಜಿ ಗ್ರಾಮ‌ ಸ್ವರಾಜ್ಯ ಪರಿಕಲ್ಪನೆಯಡಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕೆಂಬ ತತ್ವ ಪ್ರತಿಪಾದಿಸಿದ್ದರು. ಅವರ ಆದರ್ಶಪ್ರಾಯ ಮಾರ್ಗದಲ್ಲಿ ಸಾಗುತ್ತಿರುವ ಸ್ವಚ್ಛ ಭಾರತ ಅಭಿಯಾನ ಎಲ್ಲರಿಗೂ ಮಾದರಿ ಎಂದರು.

ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಯಾ ಕಟ್ಟಡಗಳ ಸುತ್ತುಮುತ್ತಲಿನ ಆವರಣವನ್ನು ಸ್ಚಚ್ಛಗೊಳಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್. ಡಿ. ವಿರೂಪಾಕ್ಷ, ಪ್ರೊ. ಬಿ. ತಿಪ್ಪೇಸ್ವಾಮಿ, ಪ್ರೊ. ವೆಂಕಟೇಶ, ಪ್ರೊ. ಗಿರೀಶ್, ಡಾ. ಧರಣಿಕುಮಾರ್, ಡಾ. ಸತ್ಯಪ್ರಕಾಶ್, ಡಾ. ಗಜಾನನ ಪ್ರಭು, ವಿವಿಧ ವಿಭಾಗಗಳ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಅಭಿಯಾನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...